ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ರಾಯಣ್ಣನ ಕೆಚ್ಚೆದೆಯ ಬದುಕು ಅನಾವರಣಗೊಳಿಸುವ ಆಕರ್ಷಕ ಶಿಲ್ಪವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.
ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿಯಲ್ಲಿ ವಿಶಾಲವಾದ ಜಾಗೆಯಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ರಾಯಣ್ಣನ ಕೆಚ್ಚೆದೆಯ ಬದುಕು ಅನಾವರಣಗೊಳಿಸುವ ಆಕರ್ಷಕ ಶಿಲ್ಪವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಲೋಕಾರ್ಪಣೆಗೊಳಿಸಿದರು. ಬೆಳಗಾವಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.ಶ್ರೀ ಕ್ಷೇತ್ರ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ, ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಸಂಗೊಳ್ಳಿ ಹಿರೇಮಠದ…
