ಸವದತ್ತಿಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣವನ್ನು ಶಾಸಕ ವಿಶ್ವಾಸ ವೈದ್ಯ ನೆರವೇರಿಸಿದರು.
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಾಲೂಕಾಡಳಿತದ ವತಿಯಿಂದ, ಕೆ.ಎಲ್.ಇ. ಸಂಸ್ಥೆಯ ಎಸ್.ಕೆ. ಪ್ರೌಢ ಶಾಲಾ ಮೈದಾನದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣವನ್ನು ಶಾಸಕ ವಿಶ್ವಾಸ ವೈದ್ಯ ಅವರು ನೆರವೇರಿಸಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ವಿವಿಧ ಶಾಲಾ ವಿದ್ಯಾರ್ಥಿಗಳು ಕನ್ನಡದ ಪರಂಪರೆ ಮತ್ತು ಏಕೀಕರಣವನ್ನು ಬಿಂಬಿಸುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ನಾಡಗೀತೆ, ಜಾನಪದ ನೃತ್ಯ ಎಲ್ಲರ ಮನಸೂರೆಗೊಂಡವು. ಈ ಮೂಲಕ ಕನ್ನಡದ ಗೌರವ ಮತ್ತು ಏಕತೆಯ ಸಂದೇಶವನ್ನು ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಸಾರಿದರು. ಈ…
