ಬಕ್ರೀದ್ ಹಬ್ಬದ ನಿಮಿತ್ಯ ಸಿ ಪಿ ಐ ವಿನಾಯಕ ಬಡಿಗೇರ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಬಕ್ರೀದ್ ಹಬ್ಬ ಆಚರಣೆ ಅಂಗವಾಗಿ ಪೊಲೀಸ್ ಠಾಣೆಯಲ್ಲಿ ಹಿಂದೂ ಮುಸ್ಲಿಂ ಮುಖಂಡರೊಂದಿಗೆ ಸಿ ಪಿ ಐ ವಿನಾಯಕ ಬಡಿಗೇರ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು ರಾಮದುರ್ಗ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹಿಂದಿನಿಂದಲೂ ಸೌಹಾರ್ದತೆಯಿಂದ ಹಬ್ಬ ಆಚರಿಸಿಕೊಂಡು ಬರಲಾಗಿದೆ, ಮುಂದಿನ ದಿನಗಳಲ್ಲೂ ಇದೇ ಸಂಸ್ಕೃತಿ ಮುಂದುವರಿಸಿಕೊಂಡು ಹೋಗಬೇಕು,ಸಾಮೂಹಿಕ ಪ್ರಾರ್ಥನೆಗೆ ತೆರಳುವಾಗ ಸಾರ್ವಜನಿಕರಿಗೆ ತೊಂದರೆಯಾಗದಂತೆ, ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಸಮುದಾಯದ ಮುಖಂಡರು ನಿರ್ವಹಣೆ…
