Prashanth Angadi

ಬೆಳಗಾವಿ ಎಸ್.ಸಿ-ಎಸ್.ಟಿ ಅನುದಾನ ದುರ್ಬಳಕೆ ತಡೆಗೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಎಸ್.ಸಿ-ಎಸ್.ಟಿ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು.ಎಸ್.ಸಿ-ಎಸ್.ಟಿ ಅನುದಾನ ದುರ್ಬಳಕೆಯಾಗುತ್ತಿರುವ ಸಾಕಷ್ಟು ಆರೋಪಗಳು ಕೇಳಿ ಬರುತ್ತಿದ್ದು, ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಾಲಿಕೆಯಲ್ಲಿ ಎಸ್.ಸಿ.ಪಿ- ಟಿ.ಎಸ್.ಪಿ ಅನುದಾನ ದುರ್ಬಳಕೆಯಾಗದಂತೆ ನಿಗದಿತ ಅವಧಿಯೊಳಗೆ ಸಮರ್ಪಕ ಬಳಕೆಯಾಗಬೇಕು. ಒಂದುವೇಳೆ ದುರ್ಬಳಕೆ ಪ್ರಕರಣ ಕಂಡು ಬಂದಲ್ಲಿ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಎಚ್ಚರಿಕೆ ನೀಡಿದರು….

Read More

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ -1ಜಿಲ್ಲಾ ವೆಬ್‍ಕಾಸ್ಟಿಂಗ್ ಕೇಂದ್ರಕ್ಕೆ ಡಿ.ಸಿ., ಸಿಇಓ ದಿಡೀರ್ ಭೇಟಿ; ಪರೀಕ್ಷೆಗಳ ಲೈವ್ ಸ್ಟ್ರೀಮಿಂಗ್ ವೀಕ್ಷಣೆ

ದಾರವಾಡ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1 ರ ಎರಡನೇಯ ದಿನವಾದ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು ಗಣಿತ ವಿಷಯ ಪರೀಕ್ಷೆ ಬರೆಯುತ್ತಿದ್ದಾರೆ.ಜಿಲ್ಲಾ ಪಂಚಾಯತ ಮೂರನೇ ಮಹಡಿಯಲ್ಲಿ ಸ್ಥಾಪಿಸಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಪರೀಕ್ಷಾ ಕೇಂದ್ರ ಹಾಗೂ ಪರೀಕ್ಷಾ ಕೊಠಡಿಗಳ ನೇರ ವೀಕ್ಷಣೆಗೆ ಸ್ಥಾಪಿಸಿರುವ ಜಿಲ್ಲಾ ವೆಬ್‍ಕಾಸ್ಟಿಂಗ್ ಕೇಂದ್ರಕ್ಕೆ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಅವರು ದಿಢೀರ್ ಭೇಟಿ ನೀಡಿ ಪರೀಕ್ಷಾ ಕೊಠಡಿಗಳ ಲೈವ್ ಸ್ಟ್ರೀಮಿಂಗ್ ವೀಕ್ಷಿಸಿದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಿಯಮಾನುಸಾರ…

Read More

ಸವದತ್ತಿ ಬೃಹತ್ ಆರೋಗ್ಯ ಮೇಳವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಬೆಳಗಾವಿ, ಬೃಹತ್ ಆರೋಗ್ಯ ಮೇಳದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳು ಭಾಗವಹಿಸಿವೆ. ರಾಜ್ಯದ ವಿವಿಧೆಡೆಯಿಂದ ಚಿಕಿತ್ಸೆ ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಶಿಕ್ಷಣ ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಜನರಿಗೆ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಮೇಳ ಆಯೋಜನೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ,…

Read More

ಎನ್.ಎಸ್.ಎಸ್ ಶಿಬಿರದ ಉದ್ಘಾಟನಾ ಸಮಾರಂಭವನ್ನು ನೆರವೇರಿಸಲಾಯಿತು.

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ಸಂಯೋಜಿತಜನತಾ ಶಿಕ್ಷಣ ಪ್ರಸಾದಕ ಸಂಘದಅಜ್ಜಪ್ಪ ಗಡಮಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಮುನವಳ್ಳಿ.ಗ್ರಾಮ ಪಂಚಾಯತಿ ತಗ್ಗಿಹಾಳದತ್ತು ಗ್ರಾಮ ಜಕಬಾಳ ದಲ್ಲಿರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ -2024-25ಶಿಬಿರದ ಸ್ಥಳ- ಸರ್ಕಾರಿ ಪ್ರಾಥಮಿಕ ಶಾಲೆ ಆವರಣ, ಜಕಬಾಳ. 20-03-2025 ಗುರುವಾರ ದಂದು ಜರುಗಿಸಲಾಯಿತು.ಈ ಕಾರ್ಯಕ್ರಮದದಿವ್ಯ ಸಾನಿಧ್ಯ :- ಶ್ರೀ ಮ.ನ. ಪ್ರ. ಸ್ವ ಮುರಘೇಂದ್ರ ಮಹಾಸ್ವಾಮಿಗಳು ಶ್ರೀ ಸೋಮಶೇಖರ್ ಮಠ ಮುನವಳ್ಳಿಅಧ್ಯಕ್ಷತೆ :- ಶ್ರೀ ಎಂ ಆರ್ ಗೋಪಶೆಟ್ಟಿ….

Read More

ಡಾ| ಬಾಬು ಜಗಜೀವನರಾಮ್ ಹಾಗೂ ಅಂಬೇಡ್ಕರ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿದರು.

ರಾಮದುರ್ಗ ಏ.5 ರಂದು ಡಾ| ಬಾಬು ಜಗಜೀವನ್‌ರಾಮ್ ಹಾಗೂ ಸಂವಿಧಾನಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ ಜಯಂತಿಯನ್ನು ಏ.14 ರಂದು ತಾಲೂಕಾಡಳಿತ ಹಾಗೂ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲು ರಾಮದುರ್ಗ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಏರ್ಪಡಿಸಿದ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಯಿತು.ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಸರಕಾರದ ನಿರ್ದೇಶನದಂತೆ ಎಲ್ಲಾ ಸರಕಾರಿ ಕಛೇರಿಗಳಲ್ಲಿ ಅಂಬೇಡ್ಕರ ಹಾಗೂ ಜಗಜೀವನ್‌ರಾಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಆಚರಣೆ ಮಾಡಿದ ನಂತರ ತಹಶೀಲ್ದಾರ ಕಾರ್ಯಾಲಯದಲ್ಲಿ…

Read More

ಪ್ರತಿ 3 ತಿಂಗಳಿಗೊಮ್ಮೆ ತಾಲೂಕು ಮಟ್ಟದಲ್ಲಿ ಎಸ್.ಸಿ., ಎಸ್.ಟಿ. ಸಮುದಾಯದ ಕುಂದುಕೊರತೆಗಳ ಸಭೆ ಜರುಗಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲಾ ಮಟ್ಟದಲ್ಲಿ ಜರುಗುವ ರೀತಿಯಲ್ಲಿ ಎಲ್ಲ ತಾಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸಲು ಪ್ರತಿ ಮೂರು ತಿಂಗಳಿಗೊಮ್ಮೆ ಕಂದಾಯ, ಪೋಲಿಸ್ , ಸಮಾಜ ಕಲ್ಯಾಣ ಪಂಚಾಯತ ರಾಜ್ ಇಲಾಖೆಗಳು ಜಂಟಿಯಾಗಿ ಸಭೆ ಜರುಗಿಸಬೇಕೆಂದು ಸಮಿತಿಗಳ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಿರ್ದೇಶಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ 2024-25 ಸಾಲಿನ ಫೆಬ್ರವರಿ-2025 ರವರೆಗಿನ ವಿವಿಧ ಇಲಾಖೆಗಳ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ…

Read More

ಸವದತ್ತಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ

ಸವದತ್ತಿ, ತಾಲೂಕಾ ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಸಹಯೋಗದಲ್ಲಿ ಮಾರ್ಚ್ 18-2025 ರಂದು ನ್ಯಾಯವಾದಿಗಳ ಹೊಸ ಸಬಾಭವನದಲ್ಲಿ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಗೌರವಾನ್ವಿತ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ. ಶಶಿಧರ ಎಮ್.ಗೌಡ ರವರು ಸಸಿಗೆ ನೀರೆರೆಯುವುದರ ಮೂಲಕ ಉದ್ಫಾಟನೆ ನೇರವೇರಿಸಿದರು. ನಂತರ ಮಾತನಾಡಿದ ಅವರು ಜಗತ್ತಿನ ಎಲ್ಲ ದೇಶಗಳು ಸಹ ಅಭಿವೃದ್ಧಿಯ ಪಥದಲ್ಲಿ ತಾವು…

Read More

ಕಿಟೆಲ್ ಕಲಾ ಮಹಾವಿದ್ಯಾಲಯಕ್ಕೆ ಉತ್ಕøಷ್ಟ ಎನ್.ಎಸ್.ಎಸ್. ಘಟಕ ಮತ್ತುಡಾ. ಸುರೇಶ ಬಿ. ನ್ಯಾಮತಿ ಅವರಿಗೆ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ ಪ್ರಧಾನ

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ ಮತ್ತು ರಾಜ್ಯ ಎನ್.ಎಸ್.ಎಸ್. ಕೋಶದ ವತಿಯಿಂದ ಮಾರ್ಚ 17, 2025 ರಂದು ರಾಜಭವನದ ಗಾಜಿನಮನೆಯಲ್ಲಿ ರಾಜ್ಯ ಪ್ರಶಸ್ತಿ ವಿತರಣಾ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು 2022-23 ಸಾಲಿನ ಎನ್.ಎಸ್.ಎಸ್. ರಾಜ್ಯ ಪ್ರಶಸ್ತಿಗಳನ್ನು ಪ್ರಧಾನ ಮಾಡಿದರು. ಕಿಟೆಲ್ ಕಲಾ ಮಹಾವಿದ್ಯಾಲಯಕ್ಕೆ ಉತ್ಕøಷ್ಟ ಎನ್.ಎಸ್.ಎಸ್. ಘಟಕ ಪ್ರಶಸ್ತಿಯನ್ನು ಧಾರವಾಡ ಕಿಟೆಲ್ ಕಲಾ ಮಹಾವಿದ್ಯಾಲಯ ಪ್ರಾಚಾರ್ಯರಾದ ಡಾ. ರೇಖಾ ಜೋಗುಳ ಮತ್ತು ಅತ್ಯುತ್ತಮ…

Read More

ರಾಜ್ಯ ಎನ್.ಎಸ್.ಎಸ್. ಸ್ವಯಂಸೇವಕ ಪ್ರಶಸ್ತಿಯನ್ನು ರಾಜ್ಯಪಾಲ ತಾವರ್ ಚಂದ್ ಗೆಹಲೋಟ್ ಅವರು ಗಂಗಾಧರ ಮಲ್ಲಿಕಾರ್ಜುನ್ ಕುರಬಗಟ್ಟಿ ಅವರಿಗೆ ಪ್ರಶಸ್ತಿಯನ್ನು ನೀಡಿದರು.

ಬೆಂಗಳೂರು ರಾಜ ಭವನದಲ್ಲಿ ನಡೆದ ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಘಟಕ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸನ್ 2022-23 ನೇ ಸಾಲಿನ ರಾಜ್ಯ ಎನ್.ಎಸ್.ಎಸ್.ಸ್ವಯಂಸೇವಕ ಪ್ರಶಸ್ತಿಯನ್ನು ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಮುನವಳ್ಳಿ ಜಿ.ಎಸ್‌.ಪಿ. ಸಂಘದ ಅಜ್ಜಪ್ಪ ಗಡಮಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಗಂಗಾಧರ ಮಲ್ಲಿಕಾರ್ಜುನ ಕುರಬಗಟ್ಟಿ ಇವರಿಗೆ ಮಾರ್ಚ್ 17ರಂದು ರಾಜ ಭವನದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹಲೋಟ್ ಅವರು ಪ್ರಶಸ್ತಿಯನ್ನು ನೀಡಿ…

Read More

ಅನಧಿಕೃತ ವಸತಿ ಶಾಲೆಗಳು ಬೇಸಿಗೆ ತರಬೇತಿ ಶಿಬಿರಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ,: ಸಿದ್ದು ಪಟ್ಟೇದಾರ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಾದ್ಯಂತ ಹಲವು ಬೇಸಿಗೆ ತರಬೇತಿ ಶಿಬಿರಗಳು ಪಠ್ಯಕ್ರಮಕ್ಕೆ ಅನುಗುಣವಾಗಿ, ವಿಶೇಷವಾಗಿ 5ನೇ ತರಗತಿ ವಿದ್ಯಾರ್ಥಿಗಳಿಗೆ ನವೋದಯ, ಸೈನಿಕ,ಆದರ್ಶ ವಿಶೇಷ ತರಬೇತಿ ಹೆಸರಿನಲ್ಲಿ ಬೇಸಿಗೆ ತರಬೇತಿ ಶಿಬಿರಗಳನ್ನು ಪ್ರಾರಂಭಿಸಿ, ಪ್ರವೇಶ ಪಡೆದು ಅಕ್ರಮ ಹಣ ಸಂಪಾದಿಸುತ್ತಿರುವ ಅನಧೀಕೃತ ವಸತಿ ಶಾಲೆಗಳು ಹಾಗೂ ಬೇಸಿಗೆ ತರಬೇತಿ ಶಿಬಿರಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆ ಶಹಾಪುರ ತಾಲ್ಲೂಕು ಅಧ್ಯಕ್ಷ ಸಿದ್ದು ಪಟ್ಟೇದಾರ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,…

Read More