ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ನಿಮಿತ್ತ ರಾಮದುರ್ಗ ಪಟ್ಟಣದಲ್ಲಿ ಡಿ.ವಾಯ್.ಎಸ್. ಪಿ. ಚಿದಂಬರ ಮಡಿವಾಳರ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನ
ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ನಿಮಿತ್ತ ರಾಮದುರ್ಗ ಪಟ್ಟಣದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳುವ ನಿಟ್ಟಿನಲ್ಲಿ ಪಟ್ಟಣದ ಡಿ.ವಾಯ್.ಎಸ್. ಪಿ. ಚಿದಂಬರ ಮಡಿವಾಳರ ನೇತೃತ್ವದಲ್ಲಿ ಪೊಲೀಸರು ಮಂಗಳವಾರ ಪಥಸಂಚಲನ ನಡೆಸಿದರು. ಈ ಸಂದರ್ಭದಲ್ಲಿ ರಾಮದುರ್ಗ ಪೊಲೀಸ್ ಠಾಣೆಯ ಪಿಎಸ್ಐ ಸವಿತಾ ಮುನ್ಯಾಳ ,ಕಟಕೋಳ ಪೋಲಿಸ್ ಠಾಣೆಯ ಪಿಎಸ್ಐ ಬಸವರಾಜ್ ಕೊನ್ನೋರೆ, ಸುರೇಬಾನ ಪೊಲೀಸ್ ಠಾಣೆಯ ಪಿಎಸ್ಐ ಶಿವಾಜಿ ಪವಾರ, ಹಾಗೂ ಪೋಲಿಸ್ ಸಿಬ್ಬಂದಿಗಳು ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು
