ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ರಸ್ತೆ ತಡೆದು ಪ್ರತಿಭಟಿಸಿದರು
ರಾಮದುರ್ಗ, ಕೇಂದ್ರ ಸರಕಾರ ಹಿಂದಿರುವ 29 ಕಾರ್ಮಿಕ ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡಿ ದುಡಿಯುವ ಜನರನ್ನು ಗುಲಾಮಗಿರಿಗೆ ತಳ್ಳುತ್ತಿರುವ ನೀತಿಯನ್ನು ಖಂಡಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ಮಿನಿ ವಿಧಾನಸೌಧದ ಎದುರು ಇರುವ ರಸ್ತೆಯನ್ನು ಸುಮಾರು ಒಂದೂವರೆ ಗಂಟೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಸ್ತೆ ತಡೆ ಮಾಡಿದ ಕಾರ್ಮಿಕ ಮುಖಂಡರನ್ನು ಮತ್ತು ಕಾರ್ಮಿಕರನ್ನು ಬಂಧಿಸಿದ ಪೋಲಿಸರು ನಂತರ ಬಿಡುಗಡೆ ಮಾಡಿದರು. ಕೇಂದ್ರ ಸರಕಾರವು ಕಾರ್ಮಿಕ ಕಾನೂನುಗಳನ್ನು ಬಂಡವಾಳದಾರರ…
