ಸರ್ಕಾರಿ ಪ್ರೌಢಶಾಲೆ ಕಗದಾಳದಲ್ಲಿ ಮಕ್ಕಳ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ್ದ “ಶಿಕ್ಷಕ-ಪೋಷಕರ ಮಹಾಸಭೆ” ಕಾರ್ಯಕ್ರಮ.
ಪಾಲಕರು ಶಿಕ್ಷಕರ ಜೊತೆ ಕೈ ಜೋಡಿಸಿದಲ್ಲಿ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಉತ್ತುಂಗಕ್ಕೆ ಒಯ್ಯಲು ಸಾಧ್ಯವಿದೆ ಎಂದು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಕೃಷ್ಣರಡ್ಡಿ ಹ ಸವದತ್ತಿರವರು ಅಭಿಪ್ರಾಯ ವ್ಯಕ್ತಪಡಿಸಿದರು. ಸರ್ಕಾರಿ ಪ್ರೌಢಶಾಲೆ ಕಗದಾಳದಲ್ಲಿ ಮಕ್ಕಳ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ್ದ “ಶಿಕ್ಷಕ-ಪೋಷಕರ ಮಹಾಸಭೆ” ಉದ್ಘಾಟಿಸಿ ಪಾಲಕರು ತಮ್ಮ ಮಕ್ಕಳನ್ನು ಕೇವಲ ಶಾಲೆಗೆ ದಾಖಲು ಮಾಡಿ ಕೈ ತೊಳೆದುಕೊಳ್ಳದೇ ,ಶಾಲೆ ಮತ್ತು ಶಿಕ್ಷಕರ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡು, ಮಕ್ಕಳ ಪ್ರಗತಿಗೆ ಕೈಜೋಡಿಸಲು ಕರೆನೀಡಿದರು.ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯರಾದ ಆರ್…
