ಬಿಜೆಪಿಯವರು ಸುಳ್ಳಿನ ಕಾರ್ಖಾನೆ ಇದ್ದಂಗೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಯರಗಟ್ಟಿಯ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಭಾನುವಾರ ನಡೆದ ಪ್ರಜಾಧ್ವನಿ 2 ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ನವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು ಮೇ 7 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದುಕೊಳ್ಳಿ. ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿದರೆ ನನಗೆ ಮತ ಹಾಕಿದಂತೆ.ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. 2014 ರಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಲೋಕಸಭೆಗೆ ನಿಂತು ಸ್ವಲ್ಪ ಮತಗಳಿಂದ ಸೋತಿದ್ದರು….
