ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ರಾಮದುರ್ಗ ಮಿನಿ ವಿಧಾನಸೌಧದ ಕಚೇರಿ ಸಭಾಂಗಣದಲ್ಲಿ ಸಹಾಯಕ ಚುನಾವಣಾಧಿಕಾರಿ ಪ್ರಶಾಂತ ಹಣಗಂಡಿ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ನಡೆಸಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಹಾಯಕ ಚುನಾವಣಾಧಿಕಾರಿ ಪ್ರಶಾಂತ ಹಣಗಂಡಿ ಅವರು ಮಾತನಾಡಿ, ಲೋಕಸಭೆಗೆಚುನಾವಣೆಗೆ ದಿನಾಂಗ ಘೋಷಣೆಯಾಗಿದ್ದು, ಈ ಹಿನ್ನಲೆಯಲ್ಲಿ ನ್ಯಾಯಸಮ್ಮತಚುನಾವಣೆ ಜರುಗಿಸುವ ಸಂಬಂಧ ರಾಮದುರ್ಗ ತಾಲೂಕಿನಾದ್ಯಂತ ಆಯಕಟ್ಟಿನ ನೀತಿ ಸಂಹಿತೆಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಚುನಾವಣೆಜಾರಿಯಾಗಿದ್ದು, ನೀತಿ ಸಂಹಿತೆ ಉಲ್ಲಂಘಿಸಿದಲ್ಲಿ ಕಾನೂನು ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗುವುದು. ರಾಮದುರ್ಗದಿಂದ ಹೊರ ಹೋಗುವ ಮತ್ತು ಒಳ ಬರುವ ಎಲ್ಲಾ ವಾಹನದ ಮೇಲೆ ನಿಗಾವಹಿಸಲು ರಾಮದುರ್ಗ ತಾಲೂಕಿನ ಬಟಕುರ್ಕಿ, ಪಂಚಗಾವಿ ಕ್ರಾಸ್,…
