ಡೆಂಗ್ಯೂ ನಿಯಂತ್ರಣಕ್ಕೆ ನೀರು ತುಂಬುವ ಪರಿಕರಗಳಲ್ಲಿ ಶುಚಿತ್ವ ಕಾಪಾಡಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ ಡೆಂಗ್ಯೂ ರೋಗ ನಿಯಂತ್ರಣಕ್ಕೆ ಬಳಕೆಗಾಗಿ ನೀರು ತುಂಬುವ ಪರಿಕರಗಳಲ್ಲಿ ಶುಚಿತ್ವ ಕಾಪಾಡಬೇಕು. ಡೆಂಗ್ಯು ಹರಡುವ ಸೊಳ್ಳೆ ನೀರಿನ ಮೇಲೆ ಮೊಟ್ಟೆ ಇಡದಂತೆ ಮತ್ತು ಸೊಳ್ಳೆ ಲಾರ್ವಾ ಉತ್ಪತ್ತಿ ತಡೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಎಲ್ಲಾ ಪ್ರದೇಶಗಳಲ್ಲಿ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಿರ್ಮೂಲನಾ ದಿನದ ಅಂಗವಾಗಿ ಜಿಲ್ಲೆಯಾದ್ಯಂತ…
