Prashanth Angadi

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾ ರಸ್ವಾಮಿ ಎರಡೂವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ವೆಂಕಟ ರಮಣೇಗೌಡ ಅವರನ್ನು ಪರಾಭವಗೊಳಿ ಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಕೇವಲ ಒಂದು ಕ್ಷೇತ್ರದಲ್ಲಷ್ಟೇ ಜೆಡಿಎಸ್ ಜಯ ಗಳಿಸಿತ್ತು. 6ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಗಳಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಪ್ರಾಬಲ್ಯ ಮೆರೆದಿತ್ತು. ಕೇವಲ ಒಂದೇ ವರ್ಷದಲ್ಲಿ ಜನಾದೇಶ ಬದಲಾಗಿದ್ದು, ಕಾಂಗ್ರೆಸ್ ಬದಲಾಗಿ ಜೆಡಿಎಸ್ಗೆ ಒಲವು ತೋರಿದ್ದಾರೆ. ತೀವ್ರ ಹಣಾಹಣಿ ಏರ್ಪಟ್ಟಿದ್ದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ನ್ನು ಜನರು ಕೈ ಹಿಡಿದಿಲ್ಲ. ಮತ್ತೆ ಜೆಡಿಎಸ್ಗೆ ಮನ್ನಣೆ ನೀಡಿದ್ದಾರೆ. 2019 ರ…

Read More

ಜಗದೀಶ್ ಶೆಟ್ಟರ್ ಅವರಿಗೆ ಚುನಾವಣಾಧಿಕಾರಿ ನಿತೇಶ್ ಪಾಟೀಲ ಪ್ರಮಾಣಪತ್ರ ವಿತರಿಸಿದರು.

02-ಬೆಳಗಾವಿ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿಯಾಗಿರುವ ಬಿಜೆಪಿಯ. ಜಗದೀಶ್ ಶೆಟ್ಟರ್ ಅವರಿಗೆ ಚುನಾವಣಾಧಿಕಾರಿ ನಿತೇಶ್ ಪಾಟೀಲ ಪ್ರಮಾಣಪತ್ರ ವಿತರಿಸಿದರು. ಚುನಾವಣಾ ವೀಕ್ಷಕರಾದ ಎಂ.ಕೆ.ಅರವಿಂದ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Read More

ಬೀಜ-ರಸಗೊಬ್ಬರ ಹೆಚ್ಚಿನ ದರ ಪಡೆದರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದರು

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ 2024-25 ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ಧತೆಗಾಗಿ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಸಗಟು ವ್ಯಾಪಾರಿಗಳ ಮತ್ತು ವಿತರಕರ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಹಿಸಿ ಮಾತನಾಡಿದರು. ಬೆಳಗಾವಿ, ಮುಂಗಾರು ಹಂಗಾಮು ಬಿತ್ತನೆ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ಸಾಕಷ್ಟು ಬೀಜ-ರಸಗೊಬ್ಬರ ದಾಸ್ತಾನು ಲಭ್ಯವಿರುತ್ತದೆ. ರೈತರಿಗೆ ಗುಣಮಟ್ಟದ ಬೀಜ-ರಸಗೊಬ್ಬರವನ್ನು ವಿತರಿಸಬೇಕು. ಕೃತಕ ಅಭಾವ ಸೃಷ್ಟಿಸುವ ಅಥವಾ ನಿಗದಿತ ದರಕ್ಕಿಂತ ಹೆಚ್ವಿನ ದರ ಪಡೆಯುವ ವರ್ತಕರು ಮತ್ತು ವಿತರಕರ ಲೈಸೆನ್ಸ್ ರದ್ದುಪಡಿಸಿ ಕಠಿಣ ಕಾನೂನು…

Read More

“ಯಂಗ್ ಮ್ಯಾನ್” ಚಿತ್ರದಲ್ಲಿ ದೇಶಪ್ರೇಮದ ಕಥೆ.ಕನ್ನಡದಲ್ಲಿ ನಿರ್ಮಾಣವಾಯಿತು ಮತ್ತೊಂದು ಸಿಂಗಲ್ ಟೇಕ್ ಚಿತ್ರ.

ಕನ್ನಡ ಚಿತ್ರರಂಗದಲ್ಲಿ ಹೊಸಪ್ರಯತ್ನಗಳು ನಡೆಯುತ್ತಿರುತ್ತದೆ. ಹೊಸತಂಡದಿಂದ 2 ಗಂಟೆ 38 ನಿಮಿಷಗಳ ಅವಧಿಯ “ಯಂಗ್ ಮ್ಯಾನ್” ಎಂಬ ಚಿತ್ರ ನಿರ್ಮಾಣವಾಗಿದೆ. ಸಿಂಗಲ್ ಟೇಕ್ ನಲ್ಲಿ ಚಿತ್ರೀಕರಣವಾಗಿರುವುದು ಈ ಚಿತ್ರದ ವಿಶೇಷ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಹಿಂದೆ ಕೆಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಇದು ಮೊದಲ ನಿರ್ದೇಶನದ ಸಿನಿಮಾ. ಚೊಚ್ಚಲ ನಿರ್ದೇಶನದಲ್ಲೇ ಏನಾದರೂ ವಿಶೇಷತೆ ಇರಬೇಕೆಂಬ ಹಂಬಲದಿಂದ ಈ ಚಿತ್ರವನ್ನು ಸಿಂಗಲ್ ಟೇಕ್ ನಲ್ಲಿ ಮಾಡಿ ಮುಗಿಸಿದ್ದೇನೆ. ಈ…

Read More

ಜೂನ್ 4ರಂದು ನಡೆಯಲಿರುವ ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ ಲೋಕಸಭಾ ಚುನಾವಣೆಯ ಮತ ಎಣಿಕೆಯು ಮಂಗಳವಾರ ಜೂನ್4 ರಂದು ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. 02-ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿರುವ ಬೆಳಗಾವಿ ನಗರದ ಆರ್.ಪಿ.ಡಿ. ಮಹಾವಿದ್ಯಾಲಯದ ಆವರಣದಲ್ಲಿ. ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಅವರು ಮಾತನಾಡಿದರು. ಮತ ಎಣಿಕೆ ಆರಂಭಕ್ಕೆ ಮುನ್ನ ಮತಯಂತ್ರಳನ್ನು ಇರಿಸಿದ ಸ್ಟ್ರಾಂಗ್ ರೂಮ್ ಗಳನ್ನು ಚುನಾವಣಾ ವೀಕ್ಷಕರು, ಉಮೇದುವಾರರು…

Read More

2024-25 ನೇ ಸಾಲಿನ ನಂದವಾಡಗಿ ಶಾಲಾ ಪ್ರಾರಂಭೋತ್ಸವ.

ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಲಾಯಿತು. ಕುಂಭದ ಮೂಲಕ ಸುಂದರವಾಗಿ ಶಾಲಾ ಪ್ರಾರಂಭೋತ್ಸವ ಜರುಗಿತು. ಮಕ್ಕಳು ಉತ್ಸಾಹ, ಸಂತಸದಿಂದ ಶಾಲೆಗೆ ಆಗಮಿಸಿದರು. ಶಾಲಾ ಮುಖ್ಯ ಗುರುಮಾತೆ, ಶಿಕ್ಷಕ ವೃಂದ ಹೂ ಗುಚ್ಛ ಹಾಗೂ ಸಿಹಿ ಹಂಚಿ ಸ್ವಾಗತಿಸಿದರು. ಊರಿನಲ್ಲಿ ಪ್ರಭಾತ ಪೇರಿ, ಕರಪತ್ರ ಹಂಚುವ ಮೂಲಕ ದಾಖಲಾತಿ ಆಂದೋಲನ ಯಶಸ್ವಿಯಾಗಿ ನೇರವೇರಿತು. ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಒಂದನೇ ವರ್ಗಕ್ಕೆ ದಾಖಲು ಮಾಡಿಸಿದರು.ಈ ಒಂದು…

Read More

ಹೂಲಿಗೊಪ್ಪದಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹುಲಿಗೊಪ್ಪ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ (SDMC) ಅಧ್ಯಕ್ಷರಾದ ಶ್ರೀ ಕೆ.ಎನ್ ಕರಿಗೌಡ್ರ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿ ನಂತರಶಾಲಾ ಮಕ್ಕಳಿಗೆ ಕೇಕ ಕತ್ತರಿಸಿ ಸಿಹಿ ವಿತರಿಸಲಾಯಿತು. ಹೊಸದಾಗಿ ದಾಖಲಾಗುವ ಮಕ್ಕಳಿಗೆ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು. ಉಡುಗೊರೆಯಾಗಿ ಅಂಕಲಿಪಿ ವಿತರಿಸಲಾಯಿತು. ಮಕ್ಕಳಿಗೆ ಸಿಹಿ ಊಟ ನೀಡಲಾಯಿತು. ಈ ವೇಳೆ ಶಾಲಾ ಪ್ರಧಾನ ಗುರುಗಳಾದ ಶ್ರೀ ಕೆ.ಜೆ ರಾಮದುರ್ಗ. ಹಿರಿಯ ಶಿಕ್ಷಕರಾದ…

Read More

ಚಿಕ್ಕೋಡಿ ತಾಲ್ಲುಕಾ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ

ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ಬುಧವಾರ ನಡೆದ ಬಾಳುಮಾ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ತಾಲ್ಲೂಕಾ ಆಸ್ಪತ್ರೆಗೆ ದಾಖಲಾಗಿರುವ ಜನರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಈ ತರಹ ಘಟನೆ ಮರುಕಳಿಸದಂತೆ ಮುಂಜಾಗೃತಿ ಕ್ರಮ ವಹಿಸಬೇಕೆಂದು ಜಿಲ್ಲಾ ಪಂಚಾಯತ ಸಿ.ಇ.ಒ ರಾಹುಲ್ ಶಿಂಧೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮುಂದಿನ ದಿನಗಳಲ್ಲಿ ಜಾತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳುವುದು, ನೀರು ಮತ್ತು ಆಹಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಕಟ್ಟು ನಿಟ್ಟಾಗಿ ನಿರ್ದೇಶನ…

Read More