ತುಪ್ಪರಿ ಹಳ್ಳ, ಬೆಣ್ಣಿಹಳದ ಪ್ರವಾಹದ ಬಗ್ಗೆ ನಿರಂತರ ನಿಗಾ, ಮುನ್ನೆಚ್ಚರಿಕೆ ವಹಿಸಿ; ಬೀಜ, ಗೊಬ್ಬರದ ಕೃತಕ ಅಭಾವ ಸೃಷ್ಟಿ ಆಗದಂತೆ ಅಧಿಕಾರಿಗಳು, ಕ್ರಮವಹಿಸಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಪೂರ್ಣ ಆವರಿಸಿದ್ದು, ಮಳೆ ತೀವ್ರಗೊಳ್ಳುತ್ತಿದೆ. ಜಿಲ್ಲೆಯ ಎರಡು ಮುಖ್ಯ ಹಳ್ಳಗಳಾದ ತುಪ್ಪರಿ ಹಳ್ಳ ಮತ್ತು ಬೆಣ್ಣಿ ಹಳ್ಳದ ಪ್ರವಾಹದ ಬಗ್ಗೆ ನಿರಂತರ ನಿಗಾ ವಹಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಎರಡು ಹಳ್ಳಗಳಿಗೆ ಸಂಬಂಧಿಸಿದ ಪಿಡಿಓಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಸ್ಥಾನಿಕವಾಗಿ ಕೇಂದ್ರ ಸ್ಥಾನದಲ್ಲಿದ್ದು, ತಾಲೂಕು ಆಡಳಿತಕ್ಕೆ ಮತ್ತು ಜಿಲ್ಲಾಡಳಿತಕ್ಕೆ ನೀರಿನ ಮಟ್ಟದ ಏರಿಕೆ ಹಾಗೂ ಪ್ರವಾಹದ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು…
