Prashanth Angadi

ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಜನಪರ ಸಂಘಟನೆಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.

ಲೈಂಗಿಕವಾಗಿ ಮಹಿಳೆಯರನ್ನು ಬಳಸಿಕೊಂಡ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಜನಪರ ಸಂಘಟನೆಗಳು ಸಮ್ಮುಖದಲ್ಲಿ ರಾಮದುರ್ಗ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.ಪ್ರತಿಭಟನಾಕಾರನ್ನು ಉದ್ದೇಶಿಸಿ ಸಿಐಟಿಯು ಕಾರ್ಮಿಕ ಮುಖಂಡ ಜಿ.ಎಂ. ಜೈನೆಖಾನ್ ಮಾತನಾಡಿ, ಇತ್ತಿಚೇಗೆ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ ಮತ್ತು ಕೊಲೆಗಳು ನಡೆಯುತ್ತಿರುವುದು ಮಾನವ ಸಮಾಜಕ್ಕೆ ನಾಚಿಕೆ ತರುವಂತಹದ್ದು. ಕಳೆದ ಕೆಲವು ದಿನಗಳಿಂದ ಹಾಸನದಲ್ಲಿ ಪೆನ್ ಡ್ರೆöÊವ್ ಮುಖಾಂತರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಸಾಮಾಜಿಕ…

Read More

ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆ

ದುರಹಂಕಾರಿ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.ರಾಮದುರ್ಗ ತಾಲೂಕಿನ ಸುರೇಬಾನ ಹಾಗೂ ಬಟಕುರ್ಕಿ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಅವರ ಪರ ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿ ಮತಯಾಚನೆ ಮಾಡಿದ ಅವರು, ಕಳೆದ ೧೦ ವರ್ಷಗಳಿಂದ ಉತ್ತಮ ಆಡಳಿತ ನಡೆಸಿದ ಮೋದಿ ಅವರನ್ನು ಕೆಳಗೆ ಇಳಿಸಲು…

Read More

ಹಾಟ್ ಏರ್ ಬಲೂನ್ ಹಾರಾಟದ ಮೂಲಕ ಮತದಾನ ಜಾಗೃತಿ

ಬೆಳಗಾವಿ ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಮತದಾನದ ಜಾಗೃತಿಗಾಗಿ ಹಾಟ್ ಏರ್ ಬಲೂನ್ ಹಾರಾಟ ಹಾಗೂ ಬೆಳಗಾವಿ ಜಿಲ್ಲೆ ಮತದಾನ ಜಾಗೃತಿ ಮಾಸ್ಕಾಟ ಅನಾವರಣ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಚಿಕ್ಕೋಡಿ, ಬೆಳಗಾವಿ ಲೋಕಸಭಾ ಮತ ಕ್ಷೇತ್ರಗಳ ಚುನಾವಣೆ ಮೇ.07 ರಂದು ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನದ ಸಮಯ ನಿಗದಿ ಪಡಿಸಲಾಗಿದೆ. ಎಲ್ಲ ಮತದಾರರು ಕಡ್ಡಾಯವಾಗಿ…

Read More

ಅಕ್ರಮಗಳ ದೂರು: ತಕ್ಷಣವೇ ಸ್ಪಂದಿಸಲು ವಿಶೇಷ ವೆಚ್ಚ ವೀಕ್ಷಕರಾದ ಬಿ.ಮುರುಳಿಕುಮಾರ್ ಅವರು ನಿರ್ದೇಶನ ನೀಡಿದರು.

ಬೆಳಗಾವಿ, ಚುನಾವಣಾ ಅಕ್ರಮಗಳ ಕುರಿತು ಸಿವಿಜಿಲ್ ಮೂಲಕ ಬರುವ ಅಥವಾ ಸಾರ್ವಜನಿಕರು ನೀಡುವ ಯಾವುದೇ ದೂರುಗಳನ್ನು ನಿರ್ಲಕ್ಷ್ಯ ಮಾಡದೇ ತಕ್ಷಣವೇ ಪರಿಶೀಲನೆ ಕೈಗೊಳ್ಳಬೇಕು ಎಂದು ವಿಶೇಷ ವೆಚ್ಚ ವೀಕ್ಷಕರಾದ ಬಿ.ಮುರುಳಿಕುಮಾರ್ ಅವರು ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣಾಧಿಕಾರಿಗಳು‌, ವೆಚ್ಚ ವೀಕ್ಷಕರು ಹಾಗೂ ವಿವಿಧ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು‌ ಮಾತನಾಡಿದರು. ಮತದಾನ ದಿನಾಂಕ ಸಮೀಪಿಸುತ್ತಿರುವುದರಿಂದ ಅಕ್ರಮಗಳ ತಡೆಗೆ ತೀವ್ರ ನಿಗಾ ವಹಿಸಬೇಕು. ಯಾವುದೇ‌ ದೂರು ಅಥವಾ ಮಾಹಿತಿ ಬಂದಾಗ ಕೂಡಲೇ ಸ್ಥಳಕ್ಕೆ…

Read More

ಚುನಾವಣಾ ವೆಚ್ಚ, ನೀತಿಸಂಹಿತೆ ಉಲ್ಲಂಘನೆ ಮೇಲೆ ನಿಗಾ ವಹಿಸಲು ವೆಚ್ಚ ವೀಕ್ಷಕರ ಸೂಚನೆ

ಬೆಳಗಾವಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ವೆಚ್ಚ ವೀಕ್ಷಕರು ನಗರದ ವಾರ್ತಾಭವನದಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳಗಾವಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಹರಕ್ರಿಪಾಲ್ ಖಟಾನಾ ಅವರು, ದಿನಪತ್ರಿಕೆ, ಟಿವಿ ಚಾನೆಲ್‌ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಪ್ರತಿಯೊಂದು ಚುನಾವಣಾ ಸುದ್ದಿ‌ ಹಾಗೂ ಜಾಹೀರಾತುಗಳ ಮೇಲೆ ನಿಗಾ ವಹಿಸಬೇಕು ಎಂದು ತಿಳಿಸಿದರು. ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳ ಚುನಾವಣಾ ಜಾಹೀರಾತುಗಳಿಗೆ…

Read More

ಮನೆ ಮನೆಗೆ ಹೋಗಿ ಮತದಾರರ ಚೀಟಿ ನೀಡಲು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಸೂಚನೆ.

ಜಿಲ್ಲಾಧಿಕಾರಿ‌ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಮಾತನಾಡಿದರು.ಮತದಾನ ದಿನ ಸಮೀಪಿಸುತ್ತಿರುವುದರಿಂದ ಚುನಾವಣಾ ಸಿಬ್ಬಂದಿ ಕೂಡಲೇ ಮನೆ ಮನೆಗೆ ತೆರಳಿ ಮತದಾರರ ಚೀಟಿ ವಿತರಣೆ ಮಾಡಬೇಕು ಎಂದು ಹೇಳಿದರು.ಮತದಾನ ಜಾಗೃತಿಗಾಗಿ ಅನೇಕ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದಕ್ಕೆ ಪೂರಕವಾಗಿ ಬಿಎಲ್.ಓ.ಗಳು ಮನೆ‌ಮನೆಗೆ ತೆರಳಿ ಮತದಾರರ ಚೀಟಿ ವಿತರಿಸುವುದರಿಂದ ಮತದಾನ‌ ಪ್ರಮಾಣ ಹೆಚ್ಚಿಸಲು ಸಾಧ್ಯವಾಗಲಿದೆ.ಕಳೆದ ಚುನಾವಣೆಯಲ್ಲಿ ಮತದಾನ ಕಡಿಮೆಯಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ತಪ್ಪದೇ…

Read More

ಗೋಕಾಕ ತಾಲೂಕಿನಾದ್ಯಾಂತ ಜಗದೀಶ್ ಶೆಟ್ಟರ್ ಗೆ ಬೆಂಬಲ…!!

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಗೋಕಾಕ್ ಮತಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಬೀರು ಬಿಸಿಲು ಲೆಕ್ಕಿಸದೆ ಸಾವಿರಾರು ಜನರು ಬೃಹತ್ ರೋಡ್ ಶೋ ನಲ್ಲಿ ಭಾಗ ವಹಿಸಿ ಮೋದಿ ಮೋದಿ ಎಂದು ಘೋಷಣೆ ಕೂಗಿ, ಬಿಜೆಪಿ ಅಭ್ಯರ್ಥಿಗೆ ಜಗದೀಶ್ ಶೆಟ್ಟರ್ ಗೆ ಬೆಂಬಲ ಸೂಚಿಸಿದರು.‌ ಗೋಕಾಕ ಮತ ಕ್ಷೇತ್ರದ ನಭಾಪೂರದಲ್ಲಿ ಖನಗಾಂವ, ಮಿಡಕನಕಟ್ಟಿ, ಶಿಲ್ತಿಭಾಂವಿ, ಮಕ್ಕಳಗೇರಿ, ಕೊಳವಿ, ಬೆಣಚಿನವರ್ಡಿ, ಮೂಲದಿನ್ನಿ, ಮಮದಾಪೂರ, ಹಿರೇನಂದಿ ಗ್ರಾಮಗಳ ಪ್ರಚಾರಾರ್ಥ ಸಮಾರಂಭದಲ್ಲಿ ಭಾಗವಹಿಸಿ, ಮತಯಾಚನೆ…

Read More

ಗೋಕಾಕ್ ಪಟ್ಟಣದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪ್ರಚಾರ ಸಭೆ

ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪರವಾಗಿ ಆಯೋಜನೆ ಮಾಡಲಾಗಿದ್ದ ಪ್ರಚಾರ ಸಭೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಿ‌ ಆದ ನಂತರ ನಮಗೆ ಹೆಮ್ಮೆ ಅನಿಸುತ್ತದೆ. ಈ ಹಿಂದೆ ಬಹಳಷ್ಟು ಪ್ರಧಾನಿಗಳನ್ನು ನೋಡಿದ್ದೇನೆ. ಇಂದಿರಾಗಾಂಧಿ ನಂತರ ಗಟ್ಟಿಯಾದ ಪ್ರಧಾನಿ ಅಂದರೆ ಅದು ನರೇಂದ್ರ ಮೋದಿಯವರು. ಪ್ರಧಾನಿ ನರೇಂದ್ರ ಮೋದಿಯವರು ಭಾರತದ ನಾಯಕರು ಅಷ್ಟೇ ಅಲ್ಲ ವಿಶ್ವಾನಾಯಕರಾಗಿ ಬೆಳೆದು ನಿಂತಿದ್ದಾರೆ. ಕಳೆದ 10…

Read More

ನಿಯಂತ್ರಣ ಕಳೆದುಕೊಂಡ ಅಮಿತ್ ಶಾ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್

ಲೋಕಸಭಾ ಚುನಾವಣೆ ಪ್ರಚಾರದ ನಿಮಿತ್ಯ ಬಿಹಾರಕ್ಕೆ ತೆರಳಿದ್ದ ವೇಳೆ ಅಮಿತ್ ಶಾ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಿಢೀರ್ ನಿಯಂತ್ರಣ ಕಳೆದುಕೊಂಡಿದ್ದು, ಅಮಿತ್ ಶಾ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬಿಹಾರದ ಬೆಗೂಸರೈನಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಂಡು ವಾಪಸ್ ಹೋಗುವಾಗ ಹೆಲಿಕಾಪ್ಟರ್ ಟೇಕ್ ಆಫ್ ಆಗುತ್ತಿದ್ದಂತೆ ಹಠಾತ್ತನೆ ನಿಯಂತ್ರಣ ತಪ್ಪಿ ಭಾರೀ ಭೀತಿ ಉಂಟು ಮಾಡಿದೆ. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್ ಪೈಲೆಟ್ ನ ನಿಯಂತ್ರಣ ಕಳೆದುಕೊಂಡಿದೆ. ಕೆಲ ಕಾಲ ಆಗಸದಲ್ಲಿ ತಿರುಗಿದೆ. ನಂತರ ಹೆಲಿಕಾಪ್ಟರ್…

Read More

ಬಿಜೆಪಿಯವರು ಸುಳ್ಳಿನ ಕಾರ್ಖಾನೆ ಇದ್ದಂಗೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಯರಗಟ್ಟಿಯ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಭಾನುವಾರ ನಡೆದ ಪ್ರಜಾಧ್ವನಿ 2 ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ನವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು ಮೇ 7 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದುಕೊಳ್ಳಿ. ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿದರೆ ನನಗೆ ಮತ ಹಾಕಿದಂತೆ.ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. 2014 ರಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಲೋಕಸಭೆಗೆ ನಿಂತು ಸ್ವಲ್ಪ ಮತಗಳಿಂದ ಸೋತಿದ್ದರು….

Read More