ವಿಜಯಪುರದಲ್ಲಿ ಜೆಎಸ್ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿರಾಮ ಮಂದಿರದಉದ್ಘಾಟನೆ ಹಿನ್ನೆಲೆಯಲ್ಲಿ ಜನವರಿ 22ರವರೆಗೆ ಉಚಿತ ಹೆರಿಗೆ ಮಾಡಿಸುವುದಾಗಿ ಘೋಷಿಸಿದೆ.
ವಿಜಯಪುರ: ಅಯೋಧ್ಯೆಯಲ್ಲಿ ರಾಮ ಮಂದಿರದಉದ್ಘಾಟನೆ ಹಿನ್ನೆಲೆಯಲ್ಲಿ ವಿಜಯಪುರದ ಖಾಸಗಿಆಸ್ಪತ್ರೆಯೊಂದು ಗುರುವಾರದಿಂದ (ಜ.18) ಜನವರಿ 22ರವರೆಗೆಉಚಿತ ಹೆರಿಗೆ ಮಾಡಿಸುವುದಾಗಿ ಘೋಷಿಸಿದೆ.ವಿಜಯಪುರದಲ್ಲಿ ಜೆಎಸ್ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆನಡೆಸುತ್ತಿರುವ ‘ಶ್ರೀ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟೆಬಲ್ಟ್ರಸ್ಟ್’ ಈ ನಿರ್ಧಾರ ಪ್ರಕಟಿಸಿದೆ.ಅಯೋಧ್ಯೆಯಲ್ಲಿ ಇದೇ ಸೋಮವಾರ(ಜ.22) ನಡೆಯಲಿರುವ‘ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ’ಯನ್ನು ಆಚರಿಸಲುಇಂದಿನಿಂದ(ಗುರುವಾರ) ಜನವರಿ 22 ರವರೆಗೆ ನಮ್ಮಆಸ್ಪತ್ರೆಯಲ್ಲಿ ಎಲ್ಲಾ ಹೆರಿಗೆಯನ್ನು ಉಚಿತವಾಗಿಮಾಡಲಾಗುತ್ತದೆ. ಐದು ದಿನಗಳ ನಿರ್ದಿಷ್ಟ ಅವಧಿಗೆ ನಮ್ಮಆಸ್ಪತ್ರೆಯಲ್ಲಿ ನಡೆಯುವ ಎಲ್ಲಾ ಹೆರಿಗೆಗಳನ್ನು ಉಚಿತವಾಗಿಮಾಡಲಾಗುತ್ತದೆ ಎಂದು ಆಸ್ಪತ್ರೆಯ ಸಿಬ್ಬಂದಿಯೊಬ್ಬರುತಿಳಿಸಿದ್ದಾರೆ.
