ಬೀದಿ ನಾಯಿಗಳ ಸರ್ವೆ 15 ದಿನಗಳಲ್ಲಿ ಆರಂಭಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪ್ರಾಣಿ ಸಂತಾನ ನಿಯಂತ್ರಣ ಮೇಲ್ವಿಚಾರಣೆ ಮತ್ತು ಅನುಷ್ಠಾನ ಸಮಿತಿಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ವಹಿಸಿ ಅವರು ಮಾತನಾಡುತ್ತಿದ್ದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಸಮೀಕ್ಷೆಯು ಸರಕಾರೇತರ ಸಂಘ ಸಂಸ್ಥೆಗಳ ಮೂಲಕ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಸಾರ್ವಜನಿಕರ ಹಾಗೂ ಪ್ರಾಣಿಗಳ ಸುರಕ್ಷತೆ ದೃಷ್ಟಿಯಿಂದ ಪ್ರಾಮಾಣಿತ ಕಾರ್ಯಾಚರಣೆ ವಿಧಾನ ಪ್ರಕಾರ ನುರಿತ ತಜ್ಞರಿಂದ ಸಮೀಕ್ಷೆ ಕೈಗೊಳ್ಳಬೇಕೆಂದು ಅವರು ಸೂಚಿಸಿದರು. 2018 ರ ಸಮೀಕ್ಷೆ ಪ್ರಕಾರ ಅವಳಿನಗರಗಳಲ್ಲಿ 26 ಸಾವಿರ ಹಾಗೂ ಜಿಲ್ಲೆಯಾದ್ಯಂತ…
