Prashanth Angadi

ಮದುವೆ ಮುಗಿಸಿ ವಾಪಸ್‌ ಮನೆಗೆ ಬರುವಾಗ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು  ಒಂದೇ ಕುಟುಂಬದ 6 ಜನ ಸಾವು

ಬೆಳಗಾವಿ:  ಮದುವೆ ಮುಗಿಸಿ ವಾಪಸ್‌ ಮನೆಗೆ ಬರುವಾಗ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು  ಒಂದೇ ಕುಟುಂಬದ 6 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ನಂದಗಡದಲ್ಲಿ ನಡೆದಿದೆ. ಶಾರುಖ್ ಪೆಂಡಾರಿ ( 30 ) ಇಕ್ಬಾಲ್ ಜಮಾದಾರ ( 50 ) ಸಾನಿಯಾ ಲಂಗೊಟಿ ( 37 ) ಉಮರ್ ಲಂಗೋಟಿ ( 17 ) ಶಬನಮ್ ಲಂಗೋಟಿ ( 37 ) ಪರಾನ್ ಲಂಗೋಟಿ ( 13 ) ಮೃತಪಟ್ಟದ್ದು ಇನ್ನುಳಿದ ಮೂವರುಗಂಭೀರವಾಗಿ ಗಾಯಗೊಂಡಿದ್ದಾರೆ. ಭೀಕರ…

Read More

ದೇವಸ್ಥಾನಗಳ ಹುಂಡಿ ಹಣ ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ವಿಚಾರವಾಗಿ ಬಿಜೆಪಿ ನಾಯಕ ಆರೋಪಕ್ಕೆ ತಿರುಗೇಟು ನೀಡಿದ ಅವರು,  ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ…

Read More

2024ರ ಲೋಕಸಭೆ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಬೆಳಗಾವಿ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗ ವಕ್ತಾರರು, ಶ್ರೀಮತಿ ಲಕ್ಷ್ಮೀ ಕೆ. ನಾಗಣ್ಣವರ ಹೇಳಿದರು

50 ವರ್ಷಗಳಿಂದ ಲೋಕಸಭಾ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ ಮೀಸಲಾತಿ ನೀಡಿರುವುದಿಲ್ಲ. ಕಳೆದವಿಧಾನ ಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಜಿಲ್ಲೆ ಅಂತಾ ವಿಕೇಂದ್ರಿಕರಣ ಮಾಡಿಸೀಟಗಳನ್ನು ಹಂಚಿಕೆ ಮಾಡಿದ್ದರು. ಆ ಸಂದರ್ಭದಲ್ಲಿ ಚಿಕ್ಕೋಡಿ ಭಾಗದವರಿಗೆ ಪ್ರಾಶಸ್ತ್ರ ನೀಡಿದರು.ಬೆಳಗಾವಿಯವರಿಗೆ ನೀಡಲಿಲ್ಲ. ಕನಿಷ್ಠ 6 ಲಕ್ಷ ಮತಗಳು ಪರಿಶಿಷ್ಟ ಜಾತಿಯ ಬೆಳಗಾವಿ ಲೋಕಸಭೆಯಲ್ಲಿಇರುವುದರಿಂದ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಹಾಗೂ ನಿಗಮಮಂಡಳಿಗಳಲ್ಲಿ ನಮಗೆಈಗಿನವರೆಗೂ ಅನ್ಯಾಯವಾಗುತ್ತಾ ಬರುತ್ತಿದೆ. 75 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಮೂಲ ಬುನಾದಿಆಗಿರುವ ಪ್ರಜೆಗಳು ಪರಿಶಿಷ್ಟ ಜಾತಿ, ಪರಿಶಿಷ್ಟ…

Read More

ಕಳೇದ 80 ಕ್ಕೂ ಅಧಿಕ ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಜಮೀನುಗಳಲ್ಲಿ ಅರಣ್ಯ ಇಲಾಖೆುಂದ ಏಕಾಏಕಿ ಸಸಿ ನೆಡಲು ಜೆಸಿಬಿ ಮೂಲಕ ಗುಂಡಿ ತೋಡಲು ಮುಂದಾದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ರೈತರ ಮಧ್ಯೆ ವಾಗ್ವಾದಕ್ಕೆ ಕಾರಣವಾದ ಘಟನೆ ಹಳೇ ತೋರಗಲ್ಲ ತಾಂಡಾದಲ್ಲಿ ನಡೆದಿದೆ.

ರಾಮದುರ್ಗ ತಾಲೂಕಿನ ಹಳೇ ತೋರಗಲ್ಲ ತಾಂಡಾದಲ್ಲಿ ಸುಮಾರು 80 ವರ್ಷಗಳಿಂದ ಸುಮಾರು 60 ಕುಟುಂಬಗಳು ವಾಸವಾಗಿವೆ. ಅದರಲ್ಲಿ ಸುಮಾರು22 ಕುಟುಂಬಗಳು 3 ರಿಂದ ನಾಲ್ಕು ಏಕರೆಯಂತೆ ತಮ್ಮ ಉಪಜೀವನಕ್ಕಾಗಿ ಅರಣ್ಯ ಇಲಾಖೆಯ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. 1986 ರಿಂದ ಆಯಾ ಸರಕಾರಕ್ಕೆ ಮನವಿ ಸಲ್ಲಿಸುತ್ತಲೇ ಬಂದಿದ್ದರು ಯಾವುದೇ ಪರಿಹಾರ ಸಿಕ್ಕಿಲ್ಲ.ಆದರೇ ಸಾಗುವಳಿ ಮಾಡಿತ್ತಿರುವ ಭೂಮಿಯಲ್ಲಿ ಅರಣ್ಯ ಇಲಾಖೆುಂದ ಸಸಿ ನೆಡುವ ಕುರಿತು ಗಮನಕ್ಕೆ ಬಂದಾಗ ಬಂಜಾರ ಸಮಾಜದ ಹೋರಾಟಾಗಾರರೊಂದಿಗೆ ಸಾಗುವಳಿ ಮಾಡುತ್ತಿರುವ ರೈತರು ಬೆಳಗಾವಿ ಅರಣ್ಯ…

Read More

ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ 4 ಮಕ್ಕಳು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು

ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ.ಬೀದಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿದ್ದು ನಾಲ್ವರು ಮಕ್ಕಳುಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬೆಳಗಾವಿಯ ಮಹಾಂತೇಶ್ ನಗರದ ದೇಸಾಯಿ ಲಾನ್ಹಿಂಬದಿಯಲ್ಲಿ ಬೀದಿ ನಾಯಿಗಳ ಸಾಮ್ರಾಜ್ಯನಿರ್ಮಾಣವಾಗಿದ್ದು ಇಲ್ಲಿ ಬೀದಿ ನಾಯಿಗಳ ದೊಡ್ಡ ಗ್ಯಾಂಗ್ಇದೆ,ಈ ಗ್ಯಾಂಗ್ ನಿನ್ನೆ ಸಂಜೆ ಮಕ್ಕಳ ಮೇಲೆ ದಾಳಿಮಾಡಿದ್ದು ನಾಲ್ವರು ಮಕ್ಕಳು ಗಾಯಗೊಂಡು ಜಿಲ್ಲಾಆಸ್ಪತ್ರೆಗೆ ದಾಖಲಾಗಿದ್ದಾರೆ.ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿಹೆಚ್ಚಾಗಿದೆ.ಇದನ್ನು ನಿಯಂತ್ರಿಸುವಲ್ಲಿ ಪಾಲಿಕೆಸಂಪೂರ್ಣವಾಗಿ ವಿಫಲವಾಗಿದೆ. ನಗರದ ಪ್ರತಿಯೊಂದುಗಲ್ಲಿ ಗಲ್ಲಿಗಳಲ್ಲಿ ಬೀದಿ ನಾಯಿಗಳ ದೊಡ್ಡ ಪಡೆ ಇದೆ.ಬೀದಿನಾಯಿಗಳ ಸಂಖ್ಯೆ…

Read More

ಕಾನಿಪ ಧ್ವನಿ ಹೋರಾಟಕ್ಕೆ ಜಯದ ಹಿನ್ನೆಲೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ಪುತ್ತಳಿಗೆ ಮಾಲಾರ್ಪಣೆ

ಕಿತ್ತೂರು ರಾಣಿ ಚೆನ್ನಮ್ಮ ನವರ ಐಕ್ಯವಾದಂತ ಸ್ಥಳ ಬೈಲಹೊಂಗಲವಾದ ಹಿನ್ನೆಲೆ ಹಾಗೂ ನಮ್ಮ ಧ್ವನಿಯ ಹೋರಾಟ ಪ್ರಾರಂಭವಾಗಿದ್ದು ಈ ಅಮ್ಮನ ಸಮಾಧಿ ಪವಿತ್ರ ಸ್ಥಳದಿಂದ ನಮಗೆ ಪ್ರಥಮ ಜಯವೆನ್ನುವಂತೆ ಗ್ರಾಮೀಣ ಪತ್ರಕರ್ತರಿಗೆ ಓಡಾಡಲು ಉಚಿತ ಬಸ್-ಪಾಸ್ ಸೌಲಭ್ಯವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಬಜೆಟ್ ನಲ್ಲಿ ಘೋಷಿಸಿದ್ದಾರೆ. ಈ ಜಯದಿಂದ ನಮಗೆ ಒಂದು ಬೇಡಿಕೆ ಈಡೇರಿದ್ದು ಇನ್ನುಳಿದಂತ ಒಂಬತ್ತು ಬೇಡಿಕೆಗಳಲ್ಲಿ ಪ್ರಮುಖ ಪತ್ರಕರ್ತರ ರಕ್ಷಣಾ ಕಾಯ್ದೆ,ಪತ್ರಕರ್ತರ ಜೀವವಿಮೆ,ಸೇವಾಭದ್ರತೆಯ ಪೇಸ್ಲಿಫ್,ನಿವೃತ್ತರಾಗುವ ಪ್ರತಿಯೊಬ್ಬ ವರದಿಗಾರರಿಗೂ ಸರ್ಕಾರದಿಂದ ಮಶಾಸನ ಹಾಗೂ ಟೋಲ್…

Read More

ರಾಜ್ಯ ಸರಕಾರದ ಪಂಚ ಗ್ಯಾರೆಂಟಿಗಳ ಸಮಾವೇಶ ಹಿನ್ನೆಲೇಯಲ್ಲಿ ಪಟ್ಟಣದ ತಾ. ಪಂ ಸಭಾಂಗಣದಲ್ಲಿ ತಹಶೀಲ್ದಾರ ಸುರೇಶ ಚವಲಾರ ಅವರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆುತು.

ರಾಜ್ಯ ಸರಕಾರದ ಪಂಚ ಗ್ಯಾರೆಂಟಿಗಳ ಸಮಾವೇಶ ಹಿನ್ನೆಲೇಯಲ್ಲಿ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ ಸಭಾಂಗಣದಲ್ಲಿ ತಹಶೀಲ್ದಾರ ಸುರೇಶ ಚವಲಾರ ಅವರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ಜರಗಿತ್ತು. ಈ ಸಭೆಯನ್ನು ಉದ್ದೇಶಿಸಿ ತಹಶೀಲ್ದಾರ ಸುರೇಶ ಚವಲಾರ ಮಾತನಾಡಿ, ರಾಜ್ಯ ಸರಕಾರದ ಪಂಚ ಗ್ಯಾರೆಂಟಿ ಯೋಜನೆಗಳಿಂದ ಯಾರು ವಂಚಿತರಾಗಿದ್ದಾರೆ ಅಂತವರಿಗೆ ಸ್ಥಳದಲ್ಲಿಯೇ ಯೋಜನೆಯ ಸೌಲಭ್ಯ ದೊರೆಯುವಂತೆ ಮಾಡುವಲ್ಲಿ ತಾಲೂಕ ಮಟ್ಟದ ಎಲ್ಲ ಅಧಿಕಾರಿಗಳು ಮುಂದಾಗಬೇಕು. ಅಲ್ಲದೇ ಸರಕಾರ ಈ ಮಹತ್ವಾಕಾಂಕ್ಷೆಯ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳ ಸಮಾವೇಶ ಯಶ್ವಿಸಿಗೋಳಿಸಲು ಎಲ್ಲ…

Read More

 ಬೆಳಗಾವಿ ನಗರದಲ್ಲಿ ಉಂಟಾಗುತ್ತಿರುವ ವಾಹಣ ದಟ್ಟಣೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ 450 ಕೋಟಿ ರೂ ವೆಚ್ಚದಲ್ಲಿ 4.50 ಕಿ.ಮೀಟರ್  ಮೇಲ್ಸೆತುವೆ ನಿರ್ಮಾಣ ಕಾಮಗಾರಿನ್ನು ಕೇಂದ್ರ ಹೆದ್ದಾರಿ ಪ್ರಾಧಿಕಾರದ ಜೊತೆ ಸೇರಿ ಪ್ರಾರಂಭಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಮೇಲೆ‌ ಬೆಟ್ಟದಷ್ಟು ನಿರೀಕ್ಷೆ ಹೊಂದಿದ್ದ ಬೆಳಗಾವಿ ಜನರಿಗೆ ಯಾವುದೇ ನಿರಾಶೆಯಾಗದ ರೀತಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಬಹು ನಿರೀಕ್ಷಿತ ಬೆಳಗಾವಿ ನಗರದಲ್ಲಿ ಫ್ಲೈ ಓವರ್ ನಿರ್ಮಾಣ ಸೇರಿದಂತೆ ಕೆಲ ಯೋಜನೆಗೆ ಘೋಷಿಸಿದ್ದು ಜನ ನಿರಾಳರಾಗಿದ್ದಾರೆ.ಬೆಳಗಾವಿ ನಗರದಲ್ಲಿ ಉಂಟಾಗುತ್ತಿರುವ ವಾಹಣ ದಟ್ಟಣೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ 450 ಕೋಟಿ ವೆಚ್ಚದಲ್ಲಿ 4.50 ಕಿ.ಮೀಟರ್  ಮೇಲ್ಸೆತುವೆ ನಿರ್ಮಾಣ ಕಾಮಗಾರಿನ್ನು ಕೇಂದ್ರ ಹೆದ್ದಾರಿ ಪ್ರಾಧಿಕಾರದ ಜೊತೆ ಸೇರಿ ಪ್ರಾರಂಭಿಸುವುದಾಗಿ ಘೋಷಣೆ ಮಾಡಲಾಗಿದೆ. ಇದರಿಂದ…

Read More

ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಕೂಡಲೇ ಕಾರ್ಡ್ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

ಬೆಳಗಾವಿ : ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಕೂಡಲೇ ಕಾರ್ಡ್ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.ವಿಧಾನಸಭೆ ಕಲಾಪದಲ್ಲಿ ಈ ಕುರಿತು ಮಾಹಿತಿ‌ ನೀಡಿರುವ ಸಚಿವರು. ಬಾಕಿ ಇರುವ ಎಲ್ಲಾ 2.95 ಲಕ್ಷ ಅರ್ಜಿಗಳನ್ನು ಪರಿಶೀಲಿಸಿ ಮಾರ್ಚ್ 31 ರ ಒಳಗೆ ಎಲ್ಲ ಅರ್ಹರಿಗೂ ಬಿಪಿಎಲ್ ಪಡಿತರ ಚೀಟಿ ವಿತರಿಸಲಾಗುವುದು. ನಂತರ ಏಪ್ರಿಲ್‌ನಲ್ಲಿ ಹೊಸದಾಗಿ ಪಡಿತರ ಚೀಟಿ…

Read More

ಬೆಳಗಾವಿ ನಗರದ ಖಡೇ ಬಜಾರಿನಲ್ಲಿ ಗ್ಯಾಸ ಸಿಲಿಂಡರ್ ಸ್ಪೋಟ ಯಾವುದೇ ಪ್ರಾಣ ಹಾನಿ ಇಲ್ಲ.

ಬೆಳಗಾವಿ : ಗ್ಯಾಸ ಅಂಗಡಿಯಲ್ಲಿ ಸುಮಾರು 7 ಗ್ಯಾಸ ಸ್ಪೋಟಗೊಂಡು ಬೆಂಕಿ ಅವಗಡ ಸಂಭವಿಸಿದ ಘಟನೆ ನಗರದ ಖಡೇ ಬಜಾರಿನಲ್ಲಿ ನಡೆದಿದೆ. ಖಡೇ ಬಜಾರದ ಬಳಿ ಇರುವ ಪೈ ಶೋರೂಮ್ ಪಕ್ಕದಲ್ಲಿರುವ ಅಂಗಡಿಯಲ್ಲಿ ಈ ಘಟನೆ ನಡೆದು ಕೆಲಹೊತ್ತು ಸುತ್ತಮುತ್ತಲಿನ ಜನ ಅತಂಕಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಘಟನೆ ವಿವರಿಸಿದ ಹಿನ್ನಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾರ್ಕೆಟ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಯಾವುದೇ…

Read More