Prashanth Angadi

ಪತ್ನಿ ಮಾಡಿದ ಕರಿಮಣಿ ಮಾಲೀಕ ನೀನಲ್ಲ ರಿಲ್ಸಗೆ ನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚಾಮರಾಜನಗರ ಪತ್ನಿ ಮಾಡಿದ ಕರಿಮಣಿ ಮಾಲೀಕ ನೀನಲ್ಲ ರಿಲ್ಸಗೆ ನೊಂದ ಪತಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33) ಮೃತ ದುರ್ದೈವಿ. ಮೃತ ಕುಮಾರ್ ನ ಸೋದರ ಮಹಾದೇವಸ್ವಾಮಿ ಮೃತ ಕುಮಾರ್ ಪತ್ನಿ ರೂಪಾ, ರೂಪಾಳ ಸೋದರ ಮಾವ ಗೋವಿಂದ ವಿರುದ್ಧ ದೂರು ದಾಖಲಾಗಿದೆ. ಸೋದರ ಮಾವ ಹಾಗೂ ಸಹೋದರಿ ಜೊತೆ ಸೇರಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ…

Read More

ಆಭರಣ ಪ್ರದರ್ಶನಕ್ಕೆ ಚಿತ್ರನಟಿ ನಿಶ್ಚಿಕಾ ನಾಯ್ಡು ಚಾಲನೆ ನೀಡಿದರು.

ಬೆಂಗಳೂರು ನಗರದ ಶೆರಟನ್‌ ಹೋಟೆಲ್‌ ನಲ್ಲಿ ಇಂದಿನಿಂದ ಫೆ. 18 ರವರೆಗೆ ನಡೆಯಲಿರುವ ವೈಭವದ “ದಿ ಜ್ಯುವೆಲರಿ ಷೋ” ಆಭರಣ ಮೇಳಕ್ಕೆ ಅದ್ದೂರಿ ಚಾಲನೆ ದೊರೆತಿದೆ. ದೇಶದ 40 ಪ್ರಮುಖ, ಪ್ರಶಸ್ತಿ ವಿಜೇತ ಹಾಗೂ ಹೆಸರಾಂತ ಆಭರಣ ತಯಾರಕರು ಭಾಗವಹಿಸಿರುವ ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಬಂಗಾರ ಖರೀದಿಗೆ ಉಜ್ವಲ ಅವಕಾಶವಿದೆ. ವಿನ್ಯಾಸ, ಗುಣಮಟ್ಟದ ಆಭರಣಗಳನ್ನು ಕೈಗೆಟುವ ಬೆಲೆಯಲ್ಲಿ ಖರೀದಿಸಲು ಇದು ಸದಾವಕಾಶವಾಗಿದೆ. ಆಭರಣ ಪ್ರದರ್ಶನಕ್ಕೆ ಚಿತ್ರನಟಿ ನಿಶ್ಚಿಕಾ ನಾಯ್ಡು ಚಾಲನೆ ನೀಡಿದರು. ಸಾಮಾಜಿಕ ಉದ್ದಿಮೆದಾರರಾದ…

Read More

ಆಶಾ ಕಾರ್ಯಕರ್ತರಿಗೆ ಗೌರವಧನ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನ 7 ಸಾವಿರ ರೂ. ಗೆ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು ಇಂದು ಅವರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಶೀಘ್ರದಲ್ಲೇ ರಾಜ್ಯದ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪರಿಶೀಲನೆ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸು ಮತ್ತು ಕಾಳಜಿಯ ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿಗೆ ರೈತ ಮುಖಂಡರು ಮತ್ತು ರೈತ ಪ್ರತಿನಿಧಿಗಳು ಅಭಿನಂದನೆ ಸಲ್ಲಿಸಿದರು.‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸು ಮತ್ತು ಕಾಳಜಿಯ ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿಗೆ ರೈತ ಮುಖಂಡರು ಮತ್ತು ರೈತ ಪ್ರತಿನಿಧಿಗಳು ಅಭಿನಂದನೆ ಸಲ್ಲಿಸಿದರು.‌ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಬಜೆಟ್ ಪೂರ್ವ ರೈತ ಮುಖಂಡರು ಮತ್ತು ರೈತ ಹೋರಾಟಗಾರರ ಸಭೆಯಲ್ಲಿ ತಮ್ಮ ಬೇಡಿಕೆಗಳನ್ನು ಮಂಡಿಸುವ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿಯ ಬಗ್ಗೆ ಅಪಾರ ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದರು. ರೈತ ಮಹಿಳೆಯರ ಮತ್ತು ರೈತ ಕುಟುಂಬಗಳ ಆರ್ಥಿಕ ಶಕ್ತಿ-ಚೈತನ್ಯವನ್ನು ಗ್ಯಾರಂಟಿ ಯೋಜನೆಗಳು ಹೆಚ್ಚಿಸಿರುವುದನ್ನು ವಿವರಿಸಿದ ಬಡಗಲಾಪುರ…

Read More

ವಿದ್ಯಾರ್ಥಿಗಳಿಂದಲೇ ಕಲಿಯುವದು ಶಿಕ್ಷಕನಾದವನಿಗೆ ಬಹಳ ಇದೆ : ಮಾಗಳದ

ಕೊಪ್ಪಳ : ಪ್ರತಿ ಶಿಕ್ಷಕ ಒಬ್ಬ ವಿದ್ಯಾರ್ಥಿಯೂ ಹೌದು, ಆತ ಕಲಿಸುವದರೊಂದಿಗೆ ಮತ್ತೆ ಮತ್ತೆ ಕಲಿಯುತ್ತಾನೆ ಹಾಗೂ ಕಲಿಯಬೇಕು, ವಿದ್ಯಾರ್ಥಿಗಳಿಂದಲೇ ಶಿಕ್ಷಕ ಕಲಿಯುವದು ಬಹಳ ಇದೆ ಎಂದು ನಿವೃತ್ತ ಶಿಕ್ಷಕ ಟಿ. ವಿ, ಮಾಗಳದ ಹೇಳಿದರು.ಅವರು ನಗರದ ಶ್ರೀ ಗವಿಸಿದ್ಧೇಶ್ವರ ಪ್ರೌಢ ಶಾಲೆಯ ೧೯೮೨ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಗುರುವಂದನೆ ಸ್ವೀಕರಿಸಿ ಮಾತನಾಡಿದರು.ಅಂದು ತಾವು ಶಿಕ್ಷಕರಾಗಿ ಬಂದ ವೇಳೆಗೆ ತಮ್ಮ ಜೊತೆಗೆ ಈಗ ವೇದಿಕೆ ಹಂಚಿಕೊಂಡ ಶಿಕ್ಷಕರಾಗಿದ್ದವರು ಹಾಗಾಗಿ ಅವರನ್ನು…

Read More

ಸಚಿವರ ಬಗ್ಗೆ ಅವಹೇಳಕಾರಿಮಾತು ಆಡಿದ್ದವನ ಸೆರೆ

ಬೆಂಗಳೂರು: ಸಾರಿಗೆ ಸಚಿವರಾಮಲಿಂಗಾರೆಡ್ಡಿ ಬಗ್ಗೆಅವಹೇಳನಕಾರಿಯಾಗಿ ಮಾತನಾಡಿದ್ದ ವ್ಯಕ್ತಿಯೊಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುನೇಗೌಡ (50) ಬಂಧಿತ.ದೊಡ್ಡಬಳ್ಳಾಪುರದ ಮುನೇಗೌಡ,ತನ್ನ ಚಾಲನಾ ಪರವಾನಗಿ (ಡಿ.ಎಲ್)ನವೀಕರಣಕ್ಕಾಗಿ ಆರ್‌ಟಿಒಗೆಅರ್ಜಿಸಲ್ಲಿಸಿದ್ದ. ಹಲವು ದಿನವಾದರೂಡಿ.ಎಲ್ ಕೈಗೆ ಸಿಕ್ಕಿರಲಿಲ್ಲ. ಡಿ.ಎಲ್ನೀಡುವಂತೆ ಹಲವು ಬಾರಿ ಆರ್‌ಟಿಒಕಚೇರಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರೂಸ್ಪಂದನೆ ಸಿಕ್ಕಿರಲಿಲ್ಲ. ಇದರಿಂದ ನೊಂದಮುನೇಗೌಡ, ಫೆ. 8ರಂದು ವಿಧಾನಸೌಧಎದುರು ಆಯೋಜಿಸಿದ್ದ ಜನಸ್ಪಂದನಾಕಾರ್ಯಕ್ರಮದಲ್ಲಿಅಹವಾಲು ಸಲ್ಲಿಸಲು ಬಂದಿದ್ದ. ಅಧಿಕಾರಿಗಳು ಸೂಕ್ತ ರೀತಿ ಅಹವಾಲು ಆಲಿಸಿರಲಿಲ್ಲ.ಮತ್ತಷ್ಟು ಸಿಟ್ಟಾದ ಮುನೇಗೌಡ,ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಗ್ಗೆ ಅವಹೇಳನಕಾರಿಯಾಗಿಮಾತನಾಡಿದ್ದ ಎಂದು ಸಾರಿಗೆ ಇಲಾಖೆ ಅಧಿಕಾರಿಗಳುಪೊಲೀಸರಿಗೆ ದೂರು ನೀಡಿದ್ದರು.

Read More

ಹಾಲಿನ ಟ್ರಕ್‌ ಹಲವು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ ಮೂವರು ಸಾವು, 20 ಮಂದಿಗೆ ಗಾಯ

ಸಿಕ್ಕಿಂನಲ್ಲಿ ಹಲವು ಕಾರುಗಳಿಗೆ ಹಾಲಿನ ಟ್ಯಾಂಕರ್ ನ ಬ್ರೇಕ್ ಫೇಲ್‌ ಆಗಿ ಡಿಕ್ಕಿ ಹೊಡೆದ  ಪರಿಣಾಮ ಮೂವರು ಸಾವನ್ನಪ್ಪಿ, 20 ಮಂದಿ ಗಾಯಗೊಂಡಿದ್ದಾರೆ. ಸಿಕ್ಕಿಂನ ಗ್ಯಾಂಗ್ಟಾಕ್ ನಲ್ಲಿ ಈ ಘಟನೆ ನಡೆದಿದೆ.ಸಿಕ್ಕಿಂನ ರಾಣಿಪೂಲ್‌ ನಲ್ಲಿ ಶನಿವಾರ ನಡೆದ ಜಾತ್ರೆಯಲ್ಲಿ ನಿಂತಿದ್ದ ಮೂರು ಕಾರುಗಳಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಆ ಪ್ರದೇಶದಲ್ಲಿ ನೆರೆದಿದ್ದ ಅನೇಕರು ನಜ್ಜುಗುಜ್ಜಾದರು.ಹಾಲಿನ ಟ್ಯಾಂಕರ್ ನ ಬ್ರೇಕ್ ಫೇಲ್‌ ಆಗಿರೋದೇ ಅಪಘಾತಕ್ಕೆ ಕಾರಣ…

Read More

ಬೆಸ್ಕಾಂ ಇಲಾಖೆಯಲ್ಲಿರೈತರಿಗೆ ಸಮರ್ಪಕ ತ್ರಿ ಫೇಸ್ ವಿದ್ಯುತ್ ನೀಡುತ್ತಿಲ್ಲ ಎಂದು ರೈತರಿಂದ ಪ್ರತಿಭಟನೆ.

ಗುಬ್ಬಿ: ತಾಲೂಕಿನ ನಿಟ್ಟೂರು ಬೆಸ್ಕಾಂ ಇಲಾಖೆಯಲ್ಲಿ ರೈತರಿಗೆ ಸಮರ್ಪಕ ತ್ರಿ ಫೇಸ್ ವಿದ್ಯುತ್ ನೀಡುವಲ್ಲಿ ಬೆಸ್ಕಾಂ ಇಲಾಖೆಯು ಸಂಪೂರ್ಣವಾಗಿ ವಿಫಲವಾಗಿದೆ ಎಂದು ರೈತರು ನಿಟ್ಟೂರು ಉಪಸ್ಥಾವರಘಟಕದ ಮುಂದೆ ದಿಡಿರ್ ಪ್ರತಿಭಟನೆ ನಡೆಸಿದರು. ರೈತರು ಮಾತನಾಡಿ ಈ ಬಾರಿ ಸಕಾಲಕ್ಕೆ ಮಳೆ ಬಾರದೆ ಯಾವ ಬೆಳೆಯನ್ನು ಬೆಳೆಯಲು ಸಾಧ್ಯವಾಗಿಲ್ಲ. ಬೇಸಿಗೆ ಮುನ್ನವೇ ಅತಿ ಹೆಚ್ಚು ಬಿಸಿಲಿನ ಛಾಯೆ ವ್ಯಾಪಕವಾಗಿ ಹೆಚ್ಚಾಗಿದ್ದು ಇರುವ ತೆಂಗು ಅಡಿಕೆ ಬೆಳೆಯನ್ನು ಉಳಿಸಿಕೊಳ್ಳಲು ಹರ ಸಹಾಸ ಪಡುವಂತಹ ಸ್ಥಿತಿ ಬಂದಿದೆ. ಅದರಲ್ಲಿ ಬೆಸ್ಕಾಂ ಇಲಾಖೆಯು ಕೂಡ…

Read More

ಶಿಕ್ಷಕನೊಬ್ಬ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್‌ನ್ನು ಕಿರಾಣಿ ಅಂಗಡಿಯೊಂದಕ್ಕೆ ಮಾರಾಟ ಮಾಡಿ ಅಮಾನತು ಆದ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ತಾಲೂಕಿನ ಲಿಂಗೇರಿ ತಾಂಡಾದ ಸರ್ಕಾರಿ ಶಾಲೆ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ತನ್ನ ಕಾರಿನಲ್ಲಿ ಕ್ಷೀರ ಯೋಜನೆಯಲ್ಲಿ ನೀಡುತ್ತಿದ್ದ ಹಾಲಿನ ಪಾಕೆಟ್‌ಗಳನ್ನು ತೆಗೆದುಕೊಂಡು ಬಂದು ಯಾದಗಿರಿ ನಗರದ ಬಿವಿ ಸ್ವಾಮಿ ಕಿರಾಣಿ ಹಾಗೂ ಜನರಲ್ ಸ್ಟೋರ್ ಅಂಗಡಿಗೆ ಮಾರಾಟಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಹಲವು ವರ್ಷಗಳಿಂದ ಈ ರೀತಿ ಮಾರಾಟಅಕ್ರಮವಾಗಿ ಮಾಡುತ್ತಿದ್ದ. ಘಟನೆಯ ಹಿನ್ನೆಲೆಯಲ್ಲಿ ಹಾಲಿನ ಪೌಡರ್ ಮಾರಾಟ ಮಾಡುವವಿಡಿಯೋ ಬಹಿರಂಗವಾಗಿದೆ. ಈ ಸಂಬಂಧ ಇಲಾಖೆಯು ಕ್ರಮ ಕೈಗೊಂಡಿದ್ದು ಸೂರ್ಯಕಾಂತ್ಅವರನ್ನು ಅಮಾನತು ಮಾಡಲು ಯಾದಗಿರಿ ಡಿಡಿಪಿಐ…

Read More

ಭೀಕರ ರಸ್ತೆ ಅಪಘಾತ, ವಾಹನ ಸವಾರ ಸಾವು

ಕಾಗವಾಡ: ತಾಲೂಕಿನ ಐಣಾಪುರ  ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಯಾದ ಪರಿಣಾಮ  ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.ಶುಕ್ರವಾರ ಈ ಘಟನೆ ಸಂಭವಿಸಿದ್ದು‌ ಮಲಕಾರಿ ರಾಯಪ್ಪ ಚೌಗಲಾ (31) ಮೃತ ಯುವಕ.‌ಕೆಂಪವಾಡ ಗ್ರಾಮದ ಅಥಣಿ ಶುಗರ್ಸ್ ಕಾರ್ಖಾನೆಗೆ ಕಬ್ಬು ಖಾಲಿ ಮಾಡಿ ಮೊಳೆ ಗ್ರಾಮದ ಮಾರ್ಗವಾಗಿ‌ ಬರುತ್ತಿದ್ದ. ಈ ವೇಳೆ ಐಣಾಪುರ ಪಟ್ಟಣದ ಸಮೀಪ ಟ್ರ್ಯಾಕ್ಟರ್ ವಿದ್ಯುತ್ ಕಂಬಕ್ಕೆ ಗುದ್ದಿ ಅಪಘಾತ ಸಂಭವಿಸಿದೆ. ರಾಯಭಾಗ ತಾಲೂಕಿನ ಮೆಖಳಿ ಗ್ರಾಮದ  ಟ್ರ್ಯಾಕ್ಟರ್ ಇದಾಗಿದ್ದು, ಈ…

Read More