ಜಿಲ್ಲಾ ಬಾಲಕಾರ್ಮಿಕರ ಯೋಜನೆ: ಕಾರ್ಯಕಾರಿ ಸಮಿತಿ ಸಭೆ
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸಂಸ್ಥೆಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ವಹಿಸಿ ಅವರು ಮಾತನಾಡಿದರು. ಕಳೆದ ಮೂರು ವರ್ಷಗಳಿಂದ ಮಕ್ಕಳ ರಕ್ಷಣಾ ಸಹಾಯವಾಣಿಗೆ ಕಡಿಮೆ ಕರೆಗಳು ಬರುತ್ತಿದ್ದು, ಲೋಪದೋಷಗಳನ್ನು ಪರಿಶೀಲಿಸಿ ಕರೆ ಬಾರದಿರುವುದಕ್ಕೆ ಸೂಕ್ತ ಕಾರಣಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು. ಬಾಲಕಾರ್ಮಿಕರ ಮುಕ್ತ ಜಿಲ್ಲೆ ಘೋಷಣೆಗೆ ಎಲ್ಲ ಸಂಬಂಧಿಸಿದ ಅಧಿಕಾರಿಗಳು ಜಂಟಿ ಸಮೀಕ್ಷೆಯಲ್ಲಿ ಭಾಗಿಯಾಗಿ ರಕ್ಷಣೆ ಮುಂದಾಗಬೇಕು. ಬಾಲಕಾರ್ಮಿಕರ ರಕ್ಷಣೆಗೆ ಸಾರ್ವಜನಿಕರು…
