ರಾಮದುರ್ಗ ಪಟ್ಟಣದ ಎಸ್ಐಎಸ್ ವೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ರಾಷ್ಟ್ರೀಯ ಏಕತಾ ಸಪ್ತಾಹದ ಅಂಗವಾಗಿ ಭಾಷಾ ಸೌಹಾರ್ದತಾ ದಿನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಾಹಿತಿ ಡಾ.ರಾಜು ಕಂಬಾರ ಮಾತನಾಡಿದರು.
ಮಾತೃಭಾಷೆಯೊಂದಿಗೆ ಎಲ್ಲ ಭಾಷೆಗಳನ್ನು ಗೌರವಿಸಿ – ಡಾ.ರಾಜು ಕಂಬಾರ ರಾಮದುರ್ಗ: ಭಾಷೆ ಮನುಷ್ಯನ ಭಾವನೆಗಳನ್ನು ಅಭಿವ್ಯಕ್ತಪಡಿಸುವುದಕ್ಕೆ ಅತ್ಯಂತ ಅವಶ್ಯಕವಾಗಿರುವ ಒಂದು ಮಾಧ್ಯಮವಾಗಿದ್ದು, ಮಾತೃಭಾಷೆಯೊಂದಿಗೆ ಇತರ ಭಾಷೆಗಳನ್ನು ಗೌರವಿಸಬೇಕೆಂದು ಸಾಹಿತಿ, ಕನ್ನಡ ಉಪನ್ಯಾಸಕ ಡಾ. ರಾಜು ಕಂಬಾರ ಅಭಿಪ್ರಾಯಸಿದರು. ಅಧ್ಯಕ್ಷತೆಯನ್ನು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಮಹೇಶ ಪಾಟೀಲ ವಹಿಸಿ ಮಾತನಾಡಿ, ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ರಾಷ್ಟ್ರವಾಗಿದ್ದು, ಬಹು ಭಾಷೆ ಮತ್ತು ಸಂಸ್ಕೃತಿ ನಮ್ಮಲ್ಲಿವೆ.ಭಾಷೆ -ಭಾಷೆಗಳಲ್ಲಿ ದ್ವೇಷ ಭಾವನೆಗಳು ಮೂಡದೆ, ಐಕ್ಯತೆ ಮೂಡಬೇಕೆಂಬ ಉದ್ದೇಶದಿಂದ ರಾಷ್ಟ್ರೀಯ ಏಕತಾ…
