ಅಕ್ರಮವಾಗಿ ಸಾಗಿಸುತ್ತಿದ್ದ 4,750 ಕೆಜಿ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯವರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಪಡಿತರ ಅಕ್ಕಿ ಅಕ್ರಮ ಸಾಗಣೆ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿತಹಸೀಲ್ದಾರ್ ಎಂ.ಎಸ್ .ತನ್ಮಯ್ ಸೂಚನೆಯಂತೆ ಪೊಲೀಸ್ ಇಲಾಖೆಯ ಸಹಕಾರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಯಿತು. ಗುಂಡ್ಲುಪೇಟೆ ಪಟ್ಟಣದ ಹಳ್ಳದಕೇರಿ ಬಳಿ ಸರಕು ಸಾಗಣೆ ವಾಹನವನ್ನು ಪರಿಶೀಲಿಸುವ ಸಲುವಾಗಿ ತಡೆಯಲಾಯಿತು. ಈ ವೇಳೆ ಚಾಲಕ ಸರಕು ತುಂಬಿದ್ದ ಲಾರಿಯನ್ನು ಬಿಟ್ಟು ಚಾಲಕ ಪರಾರಿಯಾದ. ಬಳಿಕ ಪರಿಶೀಲನೆ ನಡೆಸಿದಾಗ ವಾಹನದಲ್ಲಿ 4,750 ಕೆಜಿ ಪಡಿತರ ಅಕ್ಕಿಯನ್ನು ಪ್ಲಾಸ್ಟಿಕ್ ಚೀಲದಲ್ಲಿತುಂಬಿ ತಮಿಳುನಾಡಿಗೆ ಸಾಗಿಸಲಾಗುತ್ತಿತ್ತು. ನಂತರ ವಾಹನ ಸಹಿತ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಯಿತು….
