ಕಲಘಟಗಿ ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಡಿಸಿ, ಸಿಇಓ ಭೇಟಿ ನೀಡಿ ಪರಿಶೀಲನೆ
ಧಾರವಾಡ ಮಾ.29:ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಷಿಕ ಪರೀಕ್ಷೆ-1 ರ ನಾಲ್ಕನೇಯ ಪರೀಕ್ಷೆಯಾದ ಇಂದು ಸಮಾಜ ವಿಜ್ಞಾನ ಪರೀಕ್ಷೆಯು ಜಿಲ್ಲೆಯಾದ್ಯಂತ ಶಾಂತ ರೀತಿಯಿಂದ ಸುಸೂತ್ರವಾಗಿ ಜರುಗಿತು. ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಇಂದು ಬೆಳಿಗ್ಗೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ವಿದ್ಯಾರ್ಥಿಗಳ ಹಾಜರಾತಿ, ಗೈರು ಮಾಹಿತಿ ಪಡೆದರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಧಾರವಾಡ ತಾಲೂಕಿನ ಯರಿಕೊಪ್ಪ, ಕಲಘಟಗಿ ಪಟ್ಟಣದ ಸೇಂಟ್ ಮೇರಿ ಇಂಗ್ಲೀಷ…
