Prashanth Angadi

ಮಾಹಿತಿ ಹಕ್ಕು ಅರ್ಜಿ ಹಾಕಿ ಮಾಹಿತಿ ಕೇಳಿದ್ದಕ್ಕೆ ಪತ್ರಕರ್ತನ ಮೇಲೆ ಹಲ್ಲೆ

ಚಾಮರಾಜನಗರ: ಮೆಡಿಕಲ್ ಕಾಲೇಜು ಮತ್ತು ಭೋದನಾ ಆಸ್ಪತ್ರೆಗೆ ಸಂಬಂಧಿಸಿದಂತೆ ಹಲವಾರು ಮಾಹಿತಿಗಳನ್ನು ಮಾಹಿತಿ ಹಕ್ಕಿನಡಿ ಮಾಹಿತಿ ಕೋರಿದ್ದ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ಹಾಗೂ ಕೊಲೆ ಬೆದರಿಕೆ ಹಾಕಿದ್ದಲ್ಲದೆ,ಪತ್ರಕರ್ತನ ಮೇಲೆಯೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೆಡಿಕಲ್‌ ಕಾಲೇಜು ಡೀನ್ ಸಹಿತ ಎಂಟು ಮಂದಿ ನೌಕರರ ಮೇಲೆ ಎಫ್ ಐ ಆರ್ದಾಖಲಾಗಿದೆ.ಚಾಮರಾಜನಗರ ಯಡಪುರ ಬಳಿ ಇರುವ ಮೆಡಿಕಲ್‌ ಕಾಲೇಜು ಮತ್ತು ಭೋದನಾ ಆಸ್ಪತ್ರೆಗೆ ಸಂಬಂಧಿಸಿದಂತೆ ಪತ್ರಕರ್ತ ಗೂಳೀಪುರದ ಮಣಿಕಂಠರವರು ಮಾಹಿತಿಹಕ್ಕಿನಡಿ ಮಾಹಿತಿ…

Read More

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮಜ್ಡೂರ್ ಸಂಘದ ಜಾತ ವಾಹನವನ್ನು ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ ಕಲಾದಗಿ ಆದ್ದೋರಿಂದ ಸ್ವಾಗತಿಸಿದರು

ರಾಮದುರ್ಗ ಪಟ್ಟಣದಲ್ಲಿ ಶನಿವಾರ ರಂದು ಬೆಳಗಾವಿ ಜಿಲ್ಲಾ ಭಾರತೀಯ ಮಜೂರ್ ಸಂಘದ ವತಿಯಿಂದ ರಾಮದುರ್ಗದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮಜ್ಡೂರ್ ಸಂಘದ ಜಾತ ವಾಹನವನ್ನು ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ ಕಲಾದಗಿ ಅವರ ನೇತೃತ್ವದಲ್ಲಿ ಆದ್ದೋರಿಂದ ಸ್ವಾಗತಿಸಿ ಅವರು ಮಾತನಾಡಿದರು. ಕರ್ನಾಟಕ, ರಾಜ್ಯ ರಸ್ತೆ ಸಾರಿಗೆ ಮದ್ದೂರ್ ಸಂಘ ಕಾರ್ಮಿಕರ ಹಿತಕ್ಕಾಗಿ ಶ್ರಮವಹಿಸುತ್ತಿದೆ, ಮತ್ತು ನಿಮ್ಮ ಸೇವೆಗೆ ಸದಾ ಸಿದ್ಧರಿದ್ದೇವೆ. ಈ ಪರಿಸ್ಥಿತಿಯಲ್ಲಿ ತಮ್ಮ ಮುಂದೆ ಮದ್ದೂರ್ ಸಂಘಟನೆ ಬರುವುದಕ್ಕೆ ಬಹಳಷ್ಟುಕಾರಣಗಳು ಸಮಸ್ಯೆಗಳು ಇವೆ.’ಆಡಳಿತ ವರ್ಗದವರು…

Read More

ನಿರಂತರ ಮಳೆಯಿಂದ ಉಂಟಾದ ಬೆಳೆ ಹಾನಿಯ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ವಹಿಸಿ, ಮಾತನಾಡಿದರು.ಮುಂಗಾರು ಹಂಗಾಮಿನಲ್ಲಿ ಅತಿ ಮತ್ತು ನಿರಂತರ ಮಳೆಯಿಂದಾಗಿ ಬೆಳೆ ಹಾನಿ ಆಗಿರುವ ಕುರಿತು ಕಂದಾಯ ಮತ್ತು ಕೃಷಿ ಇಲಾಖೆ ಮಾಡುತ್ತಿರುವ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ, ವರದಿ ನೀಡಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಸೂಚಿಸಿದರು. ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಬೆಳೆ ಹಾನಿ ಆಗಿದೆ. ಈ ಕುರಿತು…

Read More

ಸ್ಥಿರಾಸ್ತಿ ದಸ್ತಾವೇಜ್ ನೋಂದಣಿಗೆ “ಆಧಾರ್” ದೃಢೀಕರಣ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಚಾಲನೆ

ಬೆಳಗಾವಿ ಇನ್ನು ಮುಂದೆ ಸ್ಥಿರಾಸ್ತಿ ಸೇರಿದಂತೆ ದಸ್ತಾವೇಜುಗಳ ನೋಂದಣಿಗೆ ಆಧಾರ್ ದೃಢೀಕರಣ ಅತ್ಯಗತ್ಯವಾಗಿದೆ. ಆಧಾರಗ ದೃಢೀಕರಣದಿಂದ ಆಸ್ತಿ ನೋಂದಣಿಯಲ್ಲಿನ ಲೋಪದೋಷ ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ಸ್ಥಿರಾಸ್ತಿಗಳ ನೋಂದಣಿ ಸಂದರ್ಭದಲ್ಲಿ ಆಧಾರ್ ಧೃಡೀಕರಣ ಪಡೆಯವ ಪ್ರಕ್ರಿಯೆಗೆ ನಗರದ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಅವರು ಚಾಲನೆ ನೀಡಿ ಮಾತನಾಡಿದರು. ಆಸ್ತಿ ನೋಂದಣಿ ಮಾಡುವಾಗ ಆಧಾರ್ ದೃಢೀಕರಣವು ಸಮ್ಮತಿ ಆಧಾರಿತವಾಗಿರುವುದರಿಂದ ಸಾರ್ವಜನಿಕರು ನಿಗದಿತ ನಮೂನೆಯಲ್ಲಿ ಸಮ್ಮತಿಯನದನು ನೀಡಬೇಕಾಗುತ್ತದೆ. ದೃಢೀಕರಣಕ್ಕಾಗಿ 30 ಸೆಕೆಂಡ್ ಗಳಲ್ಲಿ ಓಟಿಪಿ ಬರುವುದರಿಂದ…

Read More

ಬೆಳಗಾವಿ ಗಣೇಶ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಹಿಸಿ ಮಾತನಾಡಿದರು.

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಗಣೇಶ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಹಿಸಿ ಮಾತನಾಡಿದರು. ಗಣೇಶೋತ್ಸವ ಮಂಡಳಿಗಳಿಗೆ ಸುಲಭವಾಗಿ ಹಾಗೂ ಶೀಘ್ರವಾಗಿ ಒಂದೇ ಕಡೆ ಅನುಮತಿ ನೀಡಲು ಅನುಕೂಲವಾಗುವಂತೆ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ 12 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಆಯಾ ಪೊಲೀಸ್ ಠಾಣೆಗಳಲ್ಲಿಯೇ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ಹೆಸ್ಕಾಂ, ಪೊಲೀಸ್, ಮಹಾನಗರ ಪಾಲಿಕೆ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಆಯಾ ಪೊಲೀಸ್ ಠಾಣೆಯ…

Read More

50 ಲಕ್ಷ ರೂ.ಹಣಕ್ಕೆ ಬ್ಲಾಕ್ ಮೇಲ್ : ಬೆಸ್ಕಾಂ ಲೈನ್‌ಮೆನ್ ಸೇರಿ ಮೂವರ ವಿರುದ್ಧ ಎಫ್‌ಐಆರ್

ನೆಲಮಂಗಲ ಬೆಂಗಳೂರು ಹೊರವಲಯ ನೆಲಮಂಗಲ ಬೆಸ್ಕಾಂ ಉಪವಿಭಾಗ ವ್ಯಾಪ್ತಿಯ ಸೊಂಡೆಕೊಪ್ಪ ಶಾಖೆಯ ಲೈನ್ ಮೆನ್ಒಬ್ಬಖಾಸಗಿ ಯೂಟ್ಯೂಬರ್ ಜೊತೆ ಸೇರಿ ತನ್ನ ಹಿರಿಯ ಅಧಿಕಾರಿ ಸಹಾಯಕ ಇಂಜಿನಿಯರ್ ಬಳಿ 50 ಲಕ್ಷ ರೂ.ಹಣಕ್ಕೆ ಬ್ಲಾಕ್ ಮೇಲ್ಮಾಡಿರುವ ಆರೋಪ ಕೇಳಿಬಂದಿದೆ.ಬ್ಲಾಕ್ ಮೇಲ್‌ಗೆ ನೊಂದ ಸೊಂಡೆಕೊಪ್ಪ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯ‌ ನಾಗರಾಜ್ ನೆಲಮಂಗಲ ಪೊಲೀಸ್ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಸ್ಕಾಂನಲ್ಲಿ ನಾಗರಾಜ್ ಅವ್ಯವಹಾರ ಮಾಡುತಿದ್ದಾರೆ ಎಂದು ಸುಖಾ ಸುಮ್ಮನೆ ಅರ್ಜಿಗಳನ್ನು ಹಾಕಿ ಹೆದರಿಸಲು ಪ್ರಯತ್ನಿಸಿದ ಅಲ್ಲಿನ ಲೈನ್ ಮೆನ್ ಹರೀಶ್ ಸೇರಿದಂತೆ…

Read More

ಬಳ್ಳಾರಿ ಕಾನಿಪ ಧ್ವನಿ ಸಂಘಟನೆ ಜಿಲ್ಲಾಧ್ಯಕ್ಷರಾಗಿ ಗಿರಿ ಯಾದವ್ ಆಯ್ಕೆ : ಬಂಗ್ಲೆ ಮಲ್ಲಿಕಾರ್ಜುನ ನೇತೃತ್ವದಲ್ಲಿ

ಬಳ್ಳಾರಿ,ಆ.30: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯದ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಇಂದು ನಡೆದ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಎರಡನೇ ಬಾರಿಗೆ ಬಳ್ಳಾರಿ ಜಿಲ್ಲಾಧ್ಯಕ್ಷರನ್ನಾಗಿ ಗಿರಿ ಯಾದವ್ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಇಂದು ನಡೆದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ. ಜಿಲ್ಲಾ ಗೌರವ ಅಧ್ಯಕ್ಷರನ್ನಾಗಿ ಟಿ ದುರ್ಗಪ್ಪ, ಬಳ್ಳಾರಿ ಜಿಲ್ಲಾ ಅಧ್ಯಕ್ಷರನ್ನಾಗಿ ಗಿರಿ ಯಾದವ್, ಉಪಾಧ್ಯಕ್ಷರಾಗಿ ಭೀಮಣ್ಣ, ಕಂಪ್ಲಿ ಚಂದ್ರಪ್ಪ, ಜಿಲ್ಲಾ ಪ್ರಧಾನ…

Read More

ಗಣೇಶ ಹಬ್ಬ ಸ್ನೇಹ, ಸೌಹಾರ್ದತೆಯ ಪ್ರತೀಕವಾಗಿದೆ: ಡಿವೈಎಸ್‌ಪಿ ಡಿ.ಎಚ್.ಮುಲ್ಲಾ

ಬೆಟಗೇರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಒಂದೇ ತಿಂಗಳಲ್ಲಿ ಬಂದಿರುವದರಿಂದ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬವನ್ನು ಸ್ಥಳೀಯ ಸರ್ವ ಧರ್ಮಿಯರು ಶಾಂತಿ, ಸ್ನೇಹ, ಸೌಹಾರ್ದತೆಯಿಂದ ಆಚರಿಸಬೇಕು. ಗಣೇಶ ಹಬ್ಬ ಸ್ನೇಹ, ಸೌಹಾರ್ದತೆಯ ಪ್ರತೀಕವಾಗಿದೆ ಎಂದು ಗೋಕಾಕ ಡಿವೈಎಸ್‌ಪಿ ಡಿ.ಎಚ್.ಮುಲ್ಲಾ ಹೇಳಿದರು.ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಮೂಡಲಗಿ ಪೊಲೀಸ್ ಠಾಣೆ ಸಿಪಿಐ ವೃತ್ತ ಕಛೇರಿ, ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಆ.30 ರಂದು ನಡೆದ…

Read More

ಶಾಂತಿ, ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಿಸಬೇಕು: ಪಿಎಸ್‌ಐ ಬಿ.ಆನಂದ

ಬೆಟಗೇರಿ ಗ್ರಾಮದ ಸರ್ವ ಧರ್ಮಿಯರು ಶಾಂತಿ, ಸ್ನೇಹ, ಸೌಹಾರ್ದತೆಯಿಂದ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಪಿಎಸ್‌ಐ ಬಿ. ಆನಂದ ಹೇಳಿದರು.ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಆ.30 ರಂದು ನಡೆದ ಶಾಂತಿಪಾಲನಾ ಸಭೆಯಲ್ಲಿ ಮಾತನಾಡಿದರು.ಗಣೇಶ ಹಬ್ಬವನ್ನು ಸ್ಥಳೀಯರು ದುಂದು ವೆಚ್ಚ ಮಾಡಿ ಆಚರಿಸುವ ಬದಲು ಸಂಕಷ್ಟದಲ್ಲಿರುವ ಬಡವರಿಗೆ, ಅನಾಥಾಶ್ರಮದ ಮಕ್ಕಳಿಗೆ ಸಹಾಯ ಮಾಡಲು ಮುಂದಾಗಬೇಕು….

Read More

ಯುವಕನ ಕೊಲೆಯನ್ನು ಖಂಡಿಸಿ ಪಟ್ಟಣದಲ್ಲಿ ಸಿಪಿಐ(ಎಂ) ಪಕ್ಷದಲ್ಲಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ರಾಮದುರ್ಗ ಕ್ಷೌರ ಮಾಡುವ ವಿಚಾರದಲ್ಲಿ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿರುವ ಪರಿಶಿಷ್ಟ ಜಾತಿ ಯುವಕ ಯಮನೂರಪ್ಪ ಕೊಲೆ ಜಾತಿ, ದೌರ್ಜನ್ಯ ಹಾಗೂ ಅಸ್ಪೃಶ್ಯತೆಗೆ ಕರಾಳ ಕಾರ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ಕೊಲೆಯಾದವನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕೆಂದು ಸಿಪಿಐ(ಎಂ) ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಸಿಪಿಐ(ಎಂ)ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಿ.ಎಂ. ಜೈನೆಖಾನ್…

Read More