ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳು ಸುಧಾರಣೆಯಾಗಲಿ: ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ ನಗರದ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೂರನೇಯ ಮಹಡಿಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಅಂಗನವಾಡಿ ಶಾಲೆಗಳ ನೂನ್ಯತೆ ಕುರಿತಾಗಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಅವರು ಮಾತನಾಡಿದರು.ಉಚ್ಛ ನ್ಯಾಯಾಲಯದ ಆದೇಶದನ್ವಯ ಕರ್ನಾಟಕ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹಾಗೂ ಅಪೌಷ್ಟಿಕತೆ ನಿವಾರಣಾ ರಾಜ್ಯ ಸಲಹಾ ಸಮಿತಿಯ ಅಧ್ಯಕ್ಷರೂ ಆದ ವೇಣುಗೋಪಾಲಗೌಡ ಇವರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಸಮಿತಿ ರಚಿಸಲಾಗಿದೆ. ಸಮಿತಿಯ ಮೂಲಕ…
