ಯುವ ಚೇತನದಲ್ಲಿ ಸಾಧನೆಯ ಛಲಬೇಕು; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ನಿಲಯದ ವಿದ್ಯಾರ್ಥಿಗಳು ಸಿದ್ಧರಾಗಿ; ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ ಕೆಸಿಡಿ ಆವರಣದಲ್ಲಿರುವ ಸೃಜನಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಯುಕ್ತವಾಗಿ ಆಯೋಜಿಸಿರುವ ವಸತಿನಿಲಯಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಸಿದ್ಧತೆ ಕುರಿತು ಆರಂಭವಾಗಿರುವ ಯುವ ಚೇತನ ಉದ್ಘಾಟನಾ ಕಾರ್ಯಕ್ರಮದ ಅಕ್ಷತೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ವಹಿಸಿ, ಮಾತನಾಡಿದರು. ಪ್ರತಿ ತಿಂಗಳು ಯುವಚೇತನ ಕಾರ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ವಿಷಯ ತಜ್ಞರು, ತರಬೇತಿದಾರರು ಮತ್ತು ಹಿರಿಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸಗಳ ಮೂಲಕ ಮಾಹಿತಿ ನೀಡಲಿದ್ದಾರೆ….
