ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಸಭೆ
ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ ಜರುಗಿದ ಶತಮಾನೋತ್ಸವ ಸಮಿತಿಯ ಸಭೆಯ ಅಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ವಹಿಸಿ ಅವರು ಮಾತನಾಡಿದರು. ಶತಮಾನೋತ್ಸವ ಆಚರಣೆ ಬರೀ ಬೆಳಗಾವಿ ಕೇಂದ್ರೀಕೃತವಾಗಿರುವುದಿಲ್ಲ; ಪ್ರತಿಯೊಂದು ಕಾರ್ಯಕ್ರಮವು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ಅಧಿವೇಶನ ಹಾಗೂ ಗಾಂಧೀಜಿಯವರ ಜೀವನ ಸಾಧನೆ ಕುರಿತು ದೊಡ್ಡ ಪ್ರಮಾಣದಲ್ಲಿ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗುವುದು. ಎಲ್ಲ ವಿವಿದ ಜಿಲ್ಲೆಗಳಲ್ಲಿ ಗಾಂಧಿ ಅಧ್ಯಯನ ಕೇಂದ್ರ ಆರಂಭಿಸಬೇಕಿದೆ ಎಂದು ಪ್ರತಿಪಾದಿಸಿದ ಅವರು,…
