ಸೈಬರ್ ಅಪರಾಧ ತಡೆಗೆ ಪೊಲೀಸ್ ಸಿಬ್ಬಂದಿಗೆ ಅಗತ್ಯ ತರಬೇತಿ:ಸಚಿವ ಪರಮೇಶ್ವರ
ಧಾರವಾಡ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವರಾದ ಜಿ. ಪರಮೇಶ್ವರ ಅವರು ತಿಳಿಸಿದರು. ರಾಷ್ಟ್ರೀಯ ವಿಧಿ ವಿಜ್ಞಾನ ಸಂಸ್ಥೆಯ ವಿವಿಧ ವಿಭಾಗಗಳಿಗೆ ಹಾಗೂ ಪ್ರಯೋಗಾಲಯಗಳಿಗೆ ಭೇಟಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಎಲ್ಲೆಡೆ ಯಾವುದೇ ಅಡೆತಡೆಗಳಿಲ್ಲದೇ ರಾಜ್ಯ, ದೇಶ, ವಿದೇಶದಾದ್ಯಂತ ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಆಧುನಿಕ ಅಪರಾಧ ತನಿಖೆಗಳಿಗೆ ತಕ್ಕಂತೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು…
