ಬಳ್ಳಾರಿ ಜಿಲ್ಲಾಧಿಕಾರಿಗಳಿಂದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕಾರ
ಬಳ್ಳಾರಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿನ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಜನತಾ ದರ್ಶನ’ ಕಾರ್ಯಕ್ರಮವನ್ನು ಸಸಿಗೆ ನೀರು ಉಣಿಸುವುದರ ಮೂಲಕ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯ ಸರ್ಕಾರದ ನಿರ್ದೇಶನದಂತೆ ಜನತಾ ದರ್ಶನ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಮ್ಮಿಕೊಳ್ಳುತ್ತಿದ್ದು, ಸಮಸ್ಯೆಗಳನ್ನು ಆಲಿಸಿ, ಪರಿಶೀಲಿಸಿ ಪರಿಹಾರ ನೀಡಲಾಗುತ್ತಿದೆ. ಸಮಸ್ಯೆಗಳಿರುವ ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ, ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿ,…
