ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀಚೌಧರಿ ಭೇಟಿ
ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರು, ಬೀದಿದೀಪ ವ್ಯವಸ್ಥೆಯನ್ನು ತಕ್ಷಣವೇ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿಯ ಜಿಲ್ಲಾ ಆಸ್ಪತ್ರೆ ಹಾಗೂ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್)ಗೆ ಮಂಗಳವಾರ ಭೇಟಿ ನೀಡಿದ ಅವರು, ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಶುದ್ಧ ಕುಡಿಯುವ ನೀರು, ಬೀದಿದೀಪ ವ್ಯವಸ್ಥೆಯನ್ನು ಸರಿಪಡಿಸಬೇಕು; ಹೊರ ರೋಗಿಗಳ ವಿಭಾಗದಲ್ಲಿ ಶೌಚಾಲಯ ವ್ಯವಸ್ಥೆ ಒದಗಿಸಬೇಕು; ಕರ್ತವ್ಯನಿರತ ವೈದ್ಯರಿಗೆ ಸುಸಜ್ಜಿತ…
