ರಾಮದುರ್ಗ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಗ್ರಾಮ ಪಂಚಾಯಿತಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.ಬೆಳೆ ಸಮೀಕ್ಷೆ, ಕೃಷಿ ಗಣತಿ, ನೀರಾವರಿ ಗಣತಿ, ದಿಶಾಂಕ್, ವೋಟರ್ ಹೆಲ್ತ್‌ಲೈನ್, ಪೌತಿ ಆಂದೋಲನ ಆ್ಯಪ್, ಸಿ-ವಿಜಿಲ್ ಆ್ಯಪ್, ಇ-ಆಫೀಸ್, ಹಕ್ಕುಪತ್ರ, ಆಧಾರ್ ಸೀಡ್, ಸಂಯೋಜನೆ, ಲ್ಯಾಂಡ್ ಬಿಟ್ , ನಮೂನೆ 1-5ರ ವೆಬ್ ಅಪ್ಲಿಕೇಶನ್, ಸಂರಕ್ಷಣೆ, ನವೋದಯ, ಗರುಡ ಆಪ್, ಭೂಮಿ, ಬೆಳೆ ಸಮೀಕ್ಷೆಯ ಅನುಮೋದನೆ…

Read More

ಜಿಲ್ಲಾ ಮಟ್ಟದ ರಾಷ್ಟ್ರೀಯ ಪೋಷನ ಮಾಸಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್. ದೊಡ್ಡಮನಿ ಉದ್ಘಾಟಿಸಿದರು.

ದಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಪೋಷನ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಪ್ಲಾಸ್ಟಿಕ್ ವಸ್ತುಗಳನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೆಚ್ಚಿನ ಜನರು ರಾಸಾಯನಿಕ ಬಳಸಿದ ಆಹಾರವನ್ನು ಸೇವಿಸುವುದರಿಂದ ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಹ ಆಹಾರವನ್ನು ಸೇವಿಸಬಾರದು…

Read More

ಮಳೆಯಿಂದ ಮನೆ ಕುಸಿದು ಗಂಭೀರ ಗಾಯ ಸ್ಥಳಕ್ಕೆ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ್ ಭೇಟಿ ನೀಡಿದರು

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ವಾರ್ಡ್ ನಂಬರ್ 22 ರ ರಾಮಪೂರಸೈಟದ ವ್ಯಾಪ್ತಿಯ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳವಾರ ಮಧ್ಯರಾತ್ರಿ ಮನೆ ಕುಸಿದಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮನೆಯಲ್ಲಿದ್ದ ಯಲ್ಲವ್ವ ನಾಗಪ್ಪ ಯಮನೂರ,( 60 ) ಅವರನ್ನು ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ನಂತರ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗಣ್ಣವರ್ ಭೇಟಿ ನೀಡಿ ಸರ್ಕಾರದಿಂದ ಹಾನಿಗೊಳಗಾದ ಮನೆಗೆ ಶೀಘ್ರ…

Read More

ಖಾನಪೇಠ ಧನಲಕ್ಷ್ಮಿ ಸಹಕಾರಿ ಸಕ್ಕರೆಕಾರ್ಖಾನೆಯ ಆವರಣದಲ್ಲಿ ನಡೆದ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮಲ್ಲಣ್ಣ ಯಾದವಾಡ ಉದ್ಘಾಟಿಸಿದರು.

ಕಳೆದ 15 ವರ್ಷಗಳಿಂದ ಕಾರ್ಖಾನೆಯ ಆಗು ಹೋಗುಗಳನ್ನು ಅತ್ಯಂತ ಅಚ್ಚುಕಟ್ಟಾಗಿ ನಿಭಾಯಿಸಿ ಪ್ರಗತಿಯತ್ತ ಕೊಂಡೈದು ರೈತಪರವಾಗಿ ಶ್ರಮಿಸಲಾಗಿದೆ ಎಂದು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠದ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಮಂಗಳವಾರ ಜರುಗಿದ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮಲ್ಲಣ್ಣ ಯಾದವಾಡ ಉದ್ಘಾಟಿಸಿ ಮಾತನಾಡಿದ ಅವರು, ಶೇರು ಸದಸ್ಯರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 12 ವರ್ಷಗಳಿಂದ ರಿಯಾಯತಿ ದರದಲ್ಲಿ ಸಕ್ಕರೆ ವಿತರಣೆ ಮಾಡುತ್ತಿದ್ದೇವೆ….

Read More

ಬೆಟಗೇರಿ ಪಿಕೆಪಿಎಸ್‌ಗೆ ೧೫.೦೬ಲಕ್ಷ ರೂಪಾಯಿ ಲಾಭ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಸನ್೨೦೨೩-೨೪ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಸೆ.೨೩ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು.ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್೨೦೨೩-೨೪ನೇ ಸಾಲಿನಲ್ಲಿ ಸಂಘವು ಒಟ್ಟು ೧೫.೦೬.೭೭೯ ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ೫ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು ತಿಳಿಸಿದರು.ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸೋಮಗೌಡ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಶೇರ ಸದಸ್ಯರು, ಗ್ರಾಹಕರು,…

Read More

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಮೂಲ ಭೂತ ಸೌಕರ್ಯ ಗಳನ್ನು ಒದಗಿಸುವಂತೆ ಮಾನ್ಯ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಮೂಲ ಭೂತ ಸೌಕರ್ಯಗಳಾದ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್ಗಳ ಮೂಲಕ ಆಗುತ್ತಿರುವ ಸಮಸ್ಯೆಗಳ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು 17ಕ್ಕೂ ಅಧಿಕ ಮೊಬೈಲ್/ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಹಾಗೂ ಲ್ಯಾಪ್ ಟಾಪ್ ಹಾಗೂ ಅದಕ್ಕೆ ಅವಶ್ಯಕವಾಗಿರುವ ಇಂಟರ್ ನೆಟ್ , ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ…

Read More

ಪಿ.ಎಂ. ಪಾಲರೇಶಾ ಲಯನ್ಸ್ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರಕ್ಕೆ ಚಾಲನೆ ನೀಡಿದ ಗಣ್ಯರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಲಯನ್ಸ್ ಸಂಸ್ಥೆಯ ಹಾಗೂ ಹುಬ್ಬಳ್ಳಿಯ ಡಾ| ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ, ಸಾರ್ವಜನಿಕ ಆಸ್ಪತ್ರೆ ಮತ್ತು ಬೆಳಗಾವಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಇವುಗಳ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರ ಪಟ್ಟಣದ ಪಿ.ಎಂ. ಪಾಲರೇಶಾ ಲಯನ್ಸ್ ಕಣ್ಣಿನ ಆಸ್ಪತ್ರೆಯಲ್ಲಿ ಜರುಗಿತು.ಡಾ| ಎಂ.ಎಂ. ಜೋಶಿ ಆಸ್ಪತ್ರೆಯ ಶಿಬಿರ ಸಂಯೋಜಕ ವಾದಿರಾಜ ಕಟ್ಟಿ ಅವರು ಮಾತನಾಡಿ, ಲಯನ್ಸ್ ಸಂಸ್ಥೆಯ ಸೇವಾ ಕಾರ್ಯಗಳು ಬಡವರಿಗೆ ಬಹಳ ಸಹಾಯಕಾರಿ ಯಾಗಿದ್ದು ಎಲ್ಲರೂ…

Read More

ಪಟ್ಟಣದ ಅಂಚೆ ಸಿಬ್ಬಂದಿಗಳು ಪ್ರಭಾತಪೇರಿ ನಡೆಸಿ ಜನರಲ್ಲಿ ಶುದ್ಧೀಕರಣ ಹಾಗೂ ನೈರ್ಮಲ್ಯದ ಅರಿವು ಮೂಡಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಸ್ವಚ್ಛತೆಯೇ ಸೇವೆ ಅಂಚೆ ಸಪ್ತಾಹ ಅಂಗವಾಗಿ ರಾಮದುರ್ಗ ಪ್ರಧಾನ ಅಂಚೆ ಕಚೇರಿ ಸಿಬ್ಬಂದಿ ಪ್ರಧಾನ ಅಂಚೆ ಕಚೇರಿಯಿಂದ ಪ್ರಭಾತ ಪೇರಿಯೊಂದಿಗೆ ಪಟ್ಟಣದ ವಿವಿಧ ಮಾರ್ಗವಾಗಿ ಸ್ವಚ್ಛ ಭಾರತ ಅಭಿಯಾನ ಬ್ಯಾನರ ಹಿಡಿದು ಜನರಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯದ ಅರಿವು ಮೂಡಿಸುವ ನಿಟ್ಟಿನಲ್ಲಿ ಮುಂದಾದರು.ಸ್ವಚ್ಛತೆಯೇ ಸೇವೆ ಎಂಬ ಶೀರ್ಷಿಕೆ ಅಡಿಯಲ್ಲಿ ಹಸಿರೇ ಉಸಿರು, ಸ್ವಚ್ಛ ಭಾರತ ಆರೋಗ್ಯಕರ ಭಾರತ, ಸ್ವಚ್ಛ ಭಾರತ ಹಸಿರು ಭಾರತ, ಸ್ವಚ್ಛ ಮತ್ತು ಹಸಿರು ಭಾರತದ ಪರಿಪೂರ್ಣ ಕನಸು,…

Read More

ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ಮಾಸ ಆಚರಣೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ವಿದ್ಯಾ ಚೇತನ ಶಾಲೆಯಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ಮಾಸ ಆಚರಣೆ ರಾಮದುರ್ಗ ಒಂದನೇ ವಲಯದ ಕಾರ್ಯಕ್ರಮವನ್ನು ಪುರಸಭೆ ಮಾಜಿ ಅಧ್ಯಕ್ಷ ಶಂಕ್ರಪ್ಪ ಬೆನ್ನೂರ್ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ ವೇಳೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಆರ್ ಮಂಜುಳಾ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಸೆಪ್ಟೆಂಬರ್ ತಿಂಗಳಲ್ಲಿ ಪೋಷಣ ಮಾಸ ಆಚರಣೆ ಮಾಡುತ್ತಿದ್ದು ಗರ್ಭಿಣಿಯವರಿಗೆ ಪೌಷ್ಠಿಕ ಆಹಾರ ಸೇವನೆ ಬಗ್ಗೆ ಜಾಗೃತಿ ಮೂಡಿಸಿದರು. ಆರೋಗ್ಯ…

Read More

ಡ್ರಗ್ಸ್ ಪಾಜಿಟಿವ್ ಪ್ರಕರಣಗಳ ಪಾಲೊಅಪ್ ಮಾಡಿ; ಪಾಲಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡ್ರಗ್ಸ್ ನಿಯಂತ್ರಣ ಮತ್ತು ಜಾಗೃತಿ ಕಾರ್ಯಕ್ರಮಗಳ ಕುರಿತು ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿದರು. ಅವಳಿ ನಗರದಲ್ಲಿ ಮಾದಕ ವಸ್ತು ಮತ್ತು ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟದ ಕುರಿತು ತಪಾಸಣೆ, ವಿಚಾರಣೆ ಕೈಗೊಂಡ ಬಗ್ಗೆ ಸಮಿತಿಗೆ ವರದಿ ಸಲ್ಲಿಸಬೇಕು. 354 ಯುವಕರ ಪೈಕಿ 168 ಜನ ವಿದ್ಯಾರ್ಥಿಗಳಲ್ಲಿ ಡ್ರಗ್ಸ್ ಸೇವನೆ ಪಾಜಿಟಿವ್ ಬಂದಿರುವುದು ಸಾಮಾನ್ಯ ಸಂಗತಿಯಲ್ಲ. ಡ್ರಗ್ಸ್ ಹಾನಿ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಪ್ರಚಾರ ಮಾಡುವ…

Read More