ಪಾಲಕರು ತಮ್ಮ ಮಕ್ಕಳನ್ನು ಶಾಲೆಯ ಪ್ರಾರಂಭದ ದಿನದಿಂದ ಶಾಲೆಗೆ ಕಳುಹಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕರಿಸಲು ಮುಖ್ಯೋಪಾಧ್ಯಾಯರಾದ ಆರ್ ಸಿ ರಾಠೋಡ ಕರೆ ನೀಡಿದರು.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಗದಾಳ ಗ್ರಾಮದಸರ್ಕಾರಿ ಪ್ರೌಢ ಶಾಲೆ ಕಗದಾಳದಲ್ಲಿ ಹಮ್ಮಿಕೊಂಡ ಶಾಲಾ ಪ್ರಾರಂಭೋತ್ಸವದಲ್ಲಿ ಮುಖ್ಯೋಪಾಧ್ಯಾಯರಾದ ಆರ್ ಸಿ ರಾಠೋಡ ಮಾತನಾಡುತ್ತಾ, ಸರ್ಕಾರಿ ಶಾಲೆಗಳಲ್ಲಿ ಸರ್ಕಾರವು ಉಚಿತ ಶಿಕ್ಷಣ ನೀಡುವುದರ ಜೊತೆಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಬಿಸಿಊಟ ಇತ್ಯಾದಿ ಸೌಲಭ್ಯಗಳನ್ನು ನೀಡುತ್ತಿದೆ.ಅರ್ಹ ಪ್ರತಿಭಾವಂತ ಶಿಕ್ಷಕರು ಸರಕಾರಿ ಶಾಲೆಯಲ್ಲಿ ಕೆಲಸ ನಿರ್ವಹಿಸುತಿದ್ದುದರಿಂದ , ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸಿ ಪ್ರಯೋಜನ ಪಡೆಯಲು ಕೋರಿದರು. ಸರಸ್ವತಿ ಪೂಜೆ ಹಾಗೂ ಸಸಿಗೆ ನೀರು ಹಾಕುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ…
