ಜಹೂರಬಾಷಾ ಕಲೆಗಾರ ಅವರಿಗೆ ಪಿಎಚ್ಡಿ ಪ್ರದಾನ: ಶಾಸಕ ಅಶೋಕ್ ಪಟ್ಟಣ್ ಅವರಿಂದ ಸನ್ಮಾನ
ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಿವಾಸಿ ಹಾಗೂ ಗೊಣ್ಣಾಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಜಹೂರಬಾಷಾ ಕಲೆಗಾರ ಅವರಿಗೆ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ಪ್ರದಾನ ಮಾಡಿದೆ. ಈ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ಪಟ್ಟಣ್ ಅವರು ಜಹೂರಬಾಷಾ ಕಲೆಗಾರ ಅವರನ್ನು ಸನ್ಮಾನಿಸಿ, ಅವರ ಶೈಕ್ಷಣಿಕ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಡಿ.ಜಿ. ಹನುಮಂತಪ್ಪ ಅವರ ಮಾರ್ಗದರ್ಶನದಲ್ಲಿ…
