ಬೈಲಹೊಂಗಲದಲ್ಲಿ ಕುಂಭ ಮೇಳದ ಮೂಲಕ ಮತದಾನ ಜಾಗೃತಿ

ತಾಲೂಕ ಸ್ವೀಪ್‌ ಸಮೀತಿ ಬೈಲಹೊಂಗಲ, ತಾಲೂಕಾ ಆಡಳಿತ, ತಾಲೂಕ ಪಂಚಾಯತ ಬೈಲಹೊಂಗಲ ಮತ್ತು “ಸಂಜೀವಿನಿ”-DAY-NRLM ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಮಹಿಳಾ ಸ್ವಸಹಾಯ ಸಂಘದ ಪ್ರತಿನಿಧಿಗಳು ಹಾಗೂ ಸಂಜೀವಿನಿ ಒಕ್ಕೂಟಗಳ ಮುಂದಾಳತ್ವದಲ್ಲಿ ನಗರದಲ್ಲಿ “ಕುಂಬ ಮೇಳ” ದ ಮೂಲಕ ಸಾರ್ವಜನಿಕರಿಗೆ ಮತದಾನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಚಾಲನೆಯನ್ನು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ಗಂಗಾಧರ ಕಂದಕೂರ ರವರು ಚಾಲನೆ ನೀಡಿದರು.ತಾಲೂಕ ಪಂಚಾಯತಿ ಕಾರ್ಯಾಲಯದಲ್ಲಿ ಎಲ್ಲ ಮಹಿಳಾ ಸದಸ್ಯರುಗಳಿಂದ ಪ್ರತಿಜ್ಞಾ ವಿಧಿ ಭೋದನೆ…

Read More

ರಾಮದುರ್ಗದಲ್ಲಿ ಬೆಳಗಾವಿ ಲೋಕಸಭಾ ಚುನಾವಣಾ ಪ್ರಚಾರ ಸಭೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ರಾಠಿ ಫಾರ್ಮ್ ಹೌಸ್‌ನಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆಯ ಸಮ್ಮಿಲ ಸ್ವಾಭಿಮಾನಿ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ನಾವು ಹೋದಲೆಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಅಭೂತ ಪೂರ್ವ ಬೆಂಬಲ  ವ್ಯಕ್ತವಾಗುತ್ತಿದೆ ಎಂದರು.ನನ್ನ ಸ್ವಕ್ಷೇತ್ರ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದಲೇ 60 ಸಾವಿರಕ್ಕೂ ಅಧಿಕ ಮತಗಳು ಲೀಡ್, ಬೆಳಗಾವಿ ದಕ್ಷಿಣ, ಬೆಳಗಾವಿ ಉತ್ತರ ಕ್ಷೇತ್ರಗಳಿಂದ 85 ಸಾವಿರ ಮತಗಳ ಮುನ್ನಡೆ ಸಿಗುವ ವಿಶ್ವಾಸವಿದೆ. ರಾಮದುರ್ಗದಲ್ಲಿ ಸಿಕ್ಕಿರುವ ಬೆಂಬಲ ನೋಡಿದರೆ, ಕಾಂಗ್ರೆಸ್ ಅಭ್ಯರ್ಥಿ 2 ಲಕ್ಷ…

Read More

ಗ್ಯಾರಂಟಿ ಜೊತೆಗೆ ಶಿವ-ರಾಮಯ್ಯ ವಾರಂಟಿ ಇದೆ : ಜ್ಯೋತಿ

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ ಬಡ ಮತ್ತು ಮಧ್ಯಮ ವರ್ಗಕ್ಕೆ ಆಸರೆಯಾಗಿದ್ದು ಗ್ಯಾರಂಟಿಯೊಂದಿಗೆ ಡಿ.ಕೆ. ಶಿವಕುಮಾರ ಮತ್ತು ಸಿದ್ದರಾಮಯ್ಯ ಅವರ ವಾರಂಟಿ ಇದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯರಾದ ಜ್ಯೋತಿ ಎಂ. ಗೊಂಡಬಾಳ ಹೇಳಿದರು.ಅವರು ಭಾಗ್ಯನಗರ ೬ನೇ ವಾರ್ಡಿನಲ್ಲಿ ಕಾಂಗ್ರೆಸ್ ಬಡಜನರಿಗಾಗಿ ಮಾಡಿರುವ ಅನ್ನಭಾಗ್ಯ, ಯುವನಿಧಿ, ಗೃಹಭಾಗ್ಯ, ಗೃಹಜ್ಯೋತಿ ಮತ್ತು ಶಕ್ತಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಮತ್ತು ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ್ ಹಿಟ್ನಾಳ ಪರವಾಗಿ…

Read More

ಮಹಿಳಾ ಕಾಂಗ್ರೆಸ್ ಮುಖಂಡರಿಂದ ಪಾಲಾಕ್ಪಪ್ಪಗೆ ಸನ್ಮಾನ

ಕೊಪ್ಪಳ: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ನಿಸ್ವಾರ್ಥ ಸೇವೆ ಮತ್ತು ಸ್ಥಳಿಯ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಅವಿರತ ಸೇವೆ ಪರಿಗಣಿಸಿ ಕಾಂಗ್ರೆಸ್ ಸೇರಿದ ಬಿಜೆಪಿ ಮುಖಂಡ ತಾಲೂಕ ಪಂಚಾಯತಿ ಮಾಜಿ ಸದಸ್ಯ ಹುಲಗಿಯ ಪಾಲಾಕ್ಷಪ್ಪ ಗುಂಗಾಡಿ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ನೇತೃತ್ವದಲ್ಲಿ ಸನ್ಮಾನಿಸಿ ಸ್ವಾಗತಿಸಿದರು.ತಾಲ್ಲೂಕಿ ಹುಲಗಿ ಗ್ರಾಮದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಮತ್ತು ಲೋಕಸಭೆ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ ಸಮ್ಮುಖದಲ್ಲಿ…

Read More

ಸಂವಿಧಾನ ಜಾಗೃತಿ‌ ಜಾಥಾ: ಬೆಳಗಾವಿ ಜಿಲ್ಲೆಗೆ ದ್ವಿತೀಯ ಸ್ಥಾನ

ಬೆಳಗಾವಿ, ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ‌ ಸಂವಿಧಾನ‌ ಜಾಗೃತಿ ಜಾಥಾ‌ಗೆ ಬೆಳಗಾವಿ ವಿಭಾಗಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಗಣರಾಜ್ಯೋತ್ಸವ ದಿನದಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸಂವಿಧಾನ‌ ಜಾಗೃತಿ‌ ಜಾಥಾಗೆ ಚಾಲನೆ ನೀಡಿದ್ದರು. ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ಒಳಗೊಂಡಂತೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ವಿವಿಧ ಘಟನಾವಳಿಗಳ ಮೇಲೆ ಬೆಳಕು ಚೆಲ್ಲುವ ಎರಡು ಆಕರ್ಷಕ ಸ್ತಬ್ಧಚಿತ್ರಗಳು ಜಿಲ್ಲೆಯಾದ್ಯಂತ ಸಂಚರಿಸಿದ್ದವು. ಗ್ರಾಮ ಪಂಚಾಯಿತಿ, ನಗರ…

Read More

ರಾಜಶೇಖರ್ ಸ್ವಾಗತಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರಕಾರದ ಜನಪರ ಆಡಳಿತ ಮತ್ತು ಸ್ಥಳಿಯ ಶಾಸಕರು ಅವಿರತ ಸೇವೆ ಪರಿಗಣಿಸಿ ಕಾಂಗ್ರೆಸ್ ಸೇರಿದ ಬಿಜೆಪಿ ನಗರಸಭೆ ಸದಸ್ಯ ರಾಜಶೇಖರ್ ಆಡೂರ್ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ನೇತೃತ್ವದಲ್ಲಿ ಸ್ವಾಗತಿಸಿದರು.ನಗರದ ವಾರಕಾರ ಓಣಿಯ ಅವರ ಮನೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಮತ್ತು ಲೋಕಸಭೆ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಅವರನ್ನು ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿ ಸ್ವಾಗತಿಸಿದರು.ನಗರಸಭೆ ಸದಸ್ಯರಾಗಿ,…

Read More

ಲೋಕಸಭಾ ಚುನಾವಣೆಸ್ಟ್ರಾಂಗ್ ರೂಮ್ ಗಳಿಗೆ ಇವಿಎಂ ರವಾನೆ: ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ

ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮೊದಲ ಹಂತದ‌ ರ್ಯಾಂಡಮೈಜೇಷನ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ವಿಧಾನಸಭಾ ಕ್ಷೇತ್ರವಾರು ರವಾನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ನಗರದ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಗೊಡೌನ್ ದಲ್ಲಿರುವ ಎಲೆಕ್ಟ್ರಾನಿಕ ಮತ ಯಂತ್ರಗಳನ್ನು ಬಿಗಿಭದ್ರತೆಯೊಂದಿಗೆ ಆಯಾ ವಿಧಾನಸಭಾ ಮತಕ್ಷೇತ್ರಗಳಿಗೆ ಕಳುಹಿಸಲಾಯಿತು. ರ್ಯಾಂಡಮೈಜೇಷನ್ ಪ್ರಕ್ರಿಯೆಯಲ್ಲಿ ಹಂಚಿಕೆಗೊಂಡಿರುವ ಮತಯಂತ್ರಗಳನ್ನು ಜಿಪಿಎಸ್ ಆಧಾರಿತ ವಾಹನಗಳ ಮೂಲಕ ಪೊಲೀಸ್ ಭದ್ರತೆಯೊಂದಿಗೆ ಮಂಗಳವಾರ ಮಧ್ಯರಾತ್ರಿಯವರೆಗೆ ರವಾನೆ‌ ಮಾಡಲಾಯಿತು. ಆಯಾ…

Read More

ಭಾರತೀಯ ಹವಾಮಾನ ಇಲಾಖೆಯು ಮುಂದಿನ 5 ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಿದೆ.

ಮುಂದಿನ 5 ದಿನಗಳಲ್ಲಿ ಉತ್ತರ ಕರ್ನಾಟಕದ ಬಹಳಷ್ಟು ಸ್ಥಾನಗಳಲ್ಲಿ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಬಹುದೆಂದು ಹವಾಮಾನ ಇಲಾಖೆ ಹೇಳಿದೆ. ಜನರು ಹಗಲು ಸಮಯದಲ್ಲಿ ಸಾಧ್ಯವಾದಷ್ಟು ಮನೆಯಲ್ಲಿಯೇ ಇರಬೇಕು, ಜನರು ಮನೆಯಿಂದ ಹೊರಗೆ ಹೋದಾಗಲೆಲ್ಲಾ ನೀರು ಅಥವಾ ದ್ರವ ಪದಾರ್ಥಗಳನ್ನು ತಮ್ಮೊಂದಿಗೆ ಒಯ್ಯುವಂತೆ ಹವಾಮಾನ ಇಲಾಖೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕಲಬುರಗಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಐಎಂಡಿ ವಿಜ್ಞಾನಿ…

Read More

ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಮತ ಎಣಿಕಾ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಪರಿಶೀಲನೆ ಮಾಡಿದರು

ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಮತ ಎಣಿಕಾ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು ಲೋಕಸಭಾ ಸಾರ್ವತ್ರಿಕ ಚುನಾಣೆ -2024ಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿಯ ಆರ್.ಡಿ. ಹೈಸ್ಕೂಲಿನ ಮತ ಏಣಿಕೆ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಆದ ನಿತೇಶ್ ಪಾಟೀಲ ಅವರು ಗುರುವಾರದಂದು ಭೇಟಿ ನೀಡಿ‌ ಪರಿಶೀಲಿಸಿದರು. ಮತ ಏಣಿಕೆ ಕೇಂದ್ರದಲ್ಲಿನ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವಿಧಾನ ಸಭಾ ಕ್ಷೇತ್ರವಾರು ಸ್ಟ್ರಾಂಗ ರೂಂಗಳಿಗೆ ಒದಗಿಸಲಾದ ಭದ್ರತೆ ಹಾಗೂ ಮತ ಏಣಿಕೆ ಕೊಠಡಿಗಳನ್ನು ಪರಿಶೀಲಿಸಿದ…

Read More

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 14 ಲಕ್ಷ ನಗದು, 128 ಗ್ರಾಂ ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿದ್ದಕೆಎಸ್‌ಆರ್‌ಟಿಸಿ ಬಸ್‌ ಪರಿಶೀಲನೆ ನಡೆಸಿದಾಗ ಹಣ ಮತ್ತುಚಿನ್ನ ಪತ್ತೆಯಾಗಿದೆ.ತುಮಕೂರು ನಗರದ ಬಟವಾಡಿ ಬಳಿ ಶುಕ್ರವಾರ ಬೆಳಗಿನಜಾವ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 14 ಲಕ್ಷ ನಗದು, 128 ಗ್ರಾಂ ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ನಗರದ ಚಿಕ್ಕಪೇಟೆಯ ಗಾರ್ಡನ್ರಸ್ತೆಯಲ್ಲಿರುವ ಚಿನ್ನದ ಅಂಗಡಿಯೊಂದರಲ್ಲಿ ಕೆಲಸಮಾಡುತ್ತಿರುವ ನಾಗಭೂಷಣ್ ಎಂಬುವರು ಹಣ, ಚಿನ್ನತಗೆದುಕೊಂಡು ಬರುತ್ತಿದ್ದರು. ಈ ವೇಳೆ ಪೊಲೀಸರುಪರಿಶೀಲನೆ ನಡೆಸಿ, ದುಡ್ಡು ಬಂಗಾರ ಜಪ್ತಿ ಮಾಡಿದ್ದಾರೆ.ವಿನೋದ್ ಎಂಬುವರಿಗೆ ಸೇರಿದ ಚಿನ್ನ, ಬೆಳ್ಳಿ ಅಂಗಡಿಯಲ್ಲಿಕೆಲಸ ಮಾಡುತ್ತಿದ್ದರು. ಎನ್‌ಇಪಿಎಸ್ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More