ಧಾರವಾಡ ಯುಟ್ಯೂಬರ್ ಮುಕಳೆಪ್ಪ ವಿರುದ್ಧ ದೂರು : ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ !
ಕನ್ನಡದ ಜಯಪ್ರಿಯ ಯೂಟ್ಯೂಬರ್ ಕ್ವಾಜಾ aಬಂದೇನ್ವಾಜಾ ಮಹಮದ್ ಹನೀಫ್ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಯೂಟ್ಯೂಬರ್ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್ ಜಿಹಾದ್ ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನ ಮದುವೆಯಾಗಿದ್ದಾನೆ ಎಂದು ಆರೋಪಿಸಿದ್ದಾರೆ. ಮುಕಳೆಪ್ಪ ಮೂಲತಃ ಇಸ್ಲಾಂ (Islam) ಧರ್ಮಕ್ಕೆ ಸೇರಿದವನಾಗಿದ್ದು, ನಕಲಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನ ವಿವಾಹವಾಗಿದ್ದಾನೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ…
