ಮೀಡಿಯಾ ಫೆಸ್ಟ್ 2026 ರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ.
ಧಾರವಾಡ ಸ್ಪರ್ಧಾತ್ಮಕತೆಯನ್ನು ಹೊಂದಿದ ಕ್ಷೇತ್ರ ಪತ್ರಿಕೋದ್ಯಮವಾಗಿದೆ. ದಿನಪತ್ರಿಕೆಗಳು ದಿನನಿತ್ಯ ಸುದ್ಧಿ, ಜಾಹೀರಾತು, ಪ್ರಕಟಣೆಯಲ್ಲಿ ಪಾರದರ್ಶಕತೆ ಹಾಗೂ ಸಮಾಜದ ಅನೇಕ ಸವಾಲುಗಳನ್ನು ಎದುರಿಸುತ್ತವೆ. ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸುವದರಿಂದ ಅನೇಕ ಸಾಮಾಜಿಕ ತೊಡಕುಗಳು ನಿವಾರಣೆಯಾಗಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ ಅವರು ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮದ ವಿಭಾಗದ ಸಹಯೋಗದಲ್ಲಿ ಕವಿವಿ ಕನಕ ಅಧ್ಯಯನ ಪೀಠದ ಸಭಾಂಗಣದಲ್ಲಿ ಆಯೋಜಿಸಿದ್ದ ಮೀಡಿಯಾ ಫೆಸ್ಟ್ 2026 ರ ಸಮಾರೋಪ ಹಾಗೂ…
