ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ತಿರುಪತಿ, ಧರ್ಮಸ್ಥಳ ಮಾದರಿಯಲ್ಲಿ ಅಭಿವೃದ್ಧಿಗೆ ಯೋಜನೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ ಜಿಲ್ಲೆ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಬುಧವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಚಕ್ಕಡಿಗಾಡಿ, ಜೀಪ್, ಟೆಂಪೋ, ಟ್ರ್ಯಾಕ್ಟರ್, ಬೈಕ್, ಕಾರ್, ಬಸ್ ಸೇರಿದಂತೆ ಎಲ್ಲ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಸರಿಸುಮಾರು 1500 ಪೊಲೀಸ್ ಹಾಗೂ ಗೃಹರಕ್ಷಕ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಪ್ರವಾಸೋದ್ಯಮ ಸಚಿವರು, ಪ್ರವಾಸೋದ್ಯಮ ಮಂಡಳಿ ಅಧ್ಯಕರು, ಈ ಭಾಗದ ಶಾಸಕರ ಸಲಹೆಯಂತೆ ವಿವಿಧ…
