ರಾಣಿ ಚನ್ನಮ್ಮ ವಿಶ್ವವಿದ್ಯಾಲಯ: 12ನೇ ವಾರ್ಷಿಕ ಘಟಿಕೋತ್ಸವ
ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎಪಿಜೆ ಅಬ್ದುಲ್ ಕಲಾಂ “ಜ್ಞಾನ ಸಂಗಮ” ಸಭಾಂಗಣದಲ್ಲಿ ಬುಧವಾರ ಜರಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ, ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದ ಅಂತರ ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ ಜ್ಞಾನವಂತ, ಕೌಶಲ್ಯಪೂರ್ಣ ಮತ್ತು ಶಸಕ್ತ ವ್ಯಕ್ತಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಕಾಲಿಡುವ ಮೂಲಕ ಯಶಸ್ಸು ಗಳಿಸಲು ಮುಂದಾಗಬೇಕು ಎಂದು ಹೇಳಿದರು. ಸ್ವಾತಂತ್ರ್ಯ…
