ಬೆಟಗೇರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ ವಾಗ್ದಾನ..!

ಶಾಲೆಯ ನೋಟಿಸ್ ಫಲಕದ ಮೇಲೆ ವಿದ್ಯಾರ್ಥಿ ಭಾವಚಿತ್ರ*ಶಿಕ್ಷಕರಿಂದ ವಿಶೇಷ ಪಾಠ ಪ್ರವಚನ ಬೆಟಗೇರಿ:ಶಿಕ್ಷಕರಿಂದ ವಿಶೇಷ ಗಮನ… ಪಾಠ ಪ್ರವಚನ… ವಿದ್ಯಾರ್ಥಿಗಳಿಂದ ವಾಗ್ದಾನ.., ಫಲಿಂತಾಂಶ ಸುಧಾರಣೆೆಗೆ ಪ್ರೇರಣೆ… ಇದೇನು.? ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿ.ವಿ.ಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವಾಗ್ದಾನ ಎಂಬ ವಿನೂತನ ವಿಶೇಷ ಕಾರ್ಯಕ್ರಮ ನ.೭ರಂದು ನಡೆಯಿತು.ಶಾಲೆಯ ಮುಖ್ಯಾಧ್ಯಾಪಕ, ಸಹಶಿಕ್ಷಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉತ್ಸಾಹ ತುಂಬಲು ವಿದ್ಯಾರ್ಥಿಗಳಿಂದ ವಾಗ್ದಾನ ಎಂಬ ವಿನೂತನ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಸ್ವ ಸಾಮಥ್ಯದ ಶೇ೭೫, ಶೇ೮೦,…

Read More

ಬೆಂಗಳೂರುನ 18,000 ಎಕ್ರೆ ಜಮೀನಿನಲ್ಲಿ ಉಪನಗರ ಯೋಜನೆ: ವ್ಯಾಪಕ ಆಕ್ರೋಶ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ರೈತರ ಜಮೀನಿನಲ್ಲಿ ಉಪನಗರ ನಿರ್ಮಿಸಲು ಮುಂದಾಗಿದೆ. ಆದರೆ ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದು ರೈತ ವಿರೋಧಿ ನಿರ್ಧಾರ, ಕೂಡಲೇ ಈ ಯೋಜನೆಯನ್ನು ಕೈಬಿಡಬೇಕು ಎಂಬ ಒತ್ತಡಗಳು, ಆಗ್ರಹಗಳು ಹೆಚ್ಚಾಗಿವೆ. ರೈತರ ಕೃಷಿ ಜಮೀನಿನಲ್ಲಿ ಉಪನಗರ ನಿರ್ಮಾಣಕ್ಕೆ ಕೈಹಾಕಿ ಉಪ ಚುನಾವಣೆ ಹೊತ್ತಲ್ಲಿ ಸರ್ಕಾರ ಕೈಸುಟ್ಟುಕೊಂಡಿತೆ ಎನ್ನಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿ, ಸೂಲಿಬೆಲೆ ಹೋಬಳಿಗಳ 36 ಗ್ರಾಮಗಳ 18,000 ಎಕರೆ ಕೃಷಿ ಭೂಮಿಯಲ್ಲಿ ಉಪನಗರ ನಿರ್ಮಿಸಲು ನಿರ್ಧಾರ…

Read More

ಸಿಂಗಲ್ ಸೈಟ್ ಗಳಿಗೆ ಬಿಬಿಎಂಪಿ ಎ ಅಥವಾ ಬಿ ಖಾತೆ ಸ್ಥಗಿತ; ಬಿಡಿಎ ಒಪ್ಪಿಗೆ ಇದ್ರೆ ಮಾತ್ರ ಖಾತಾ!

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ವತಿಯಿಂದ ಅಂಗೀಕಸಲ್ಪಡದೆ ಇರುವ ಬಡಾವಣೆಗಳಲ್ಲಿನ ಸಿಂಗಲ್ ಸೈಟ್ ಗಳಿಗೆ ‘A’ ಅಥವಾ ‘B’ ಖಾತೆ (ಏಕ ನಿವೇಶನ ಸ್ವತ್ತು) ನೀಡುವ ಪದ್ಧತಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಿಲ್ಲಿಸಿರುವುದಾಗಿ ಪ್ರಕಟಿಸಿದೆ. ಒಂದು ವೇಳೆ, ಕೃಷಿಯೇತರ ಚಟುವಟಿಕೆಗಳಿಗಾಗಿ ಭೂಪರಿವರ್ತನೆ ಮಾಡಲಾಗಿದ್ದರೂ ಆ ಭೂಮಿಯಲ್ಲಿರುವ ಯಾವುದೇ ಸಿಂಗಲ್ ಸೈಟ್ ಗೆ ಎ ಖಾತೆ ಅಥವಾ ಬಿ ಖಾತೆಯನ್ನು ನೀಡುವುದನ್ನು ನಿಲ್ಲಿಸಿರುವುದಾಗಿ ಬಿಬಿಎಂಪಿ ಸ್ಪಷ್ಟಪಡಿಸಿದೆ. ಇತ್ತೀಚೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಬಿಬಿಎಂಪಿಗೆ…

Read More

ಎಲ್ಲಾ ಖಾಸಗಿ ಆಸ್ತಿ ಮೇಲೆ ಸರ್ಕಾರಕ್ಕೆ ಹಕ್ಕಿಲ್ಲ; ಸುಪ್ರೀಂ ಐತಿಹಾಸಿಕ ತೀರ್ಪು

ನವದೆಹಲಿ: ಖಾಸಗಿ ಆಸ್ತಿಗಳ (Private Property) ಮೇಲೆ ಸರ್ಕಾರಿ ಹಕ್ಕಿನ ವ್ಯಾಪ್ತಿ ಎಲ್ಲಿಯವರೆಗೆ ಇದೆ ಎಂಬ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಎಲ್ಲಾ ಖಾಸಗಿ ಹಕ್ಕುಗಳ ಮೇಲೆ ರಾಜ್ಯ ಸರ್ಕಾರಗಳ ಮೇಲೆ ಹಕ್ಕುಗಳು ಇರುವುದಿಲ್ಲ ಎಂದು ಕೋರ್ಟ್‌ ಸ್ಪಷ್ಟವಾಗಿ ತಿಳಿಸಿದೆ. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ, ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಬಹುದು ಎಂದು ನ್ಯಾ. ಕೃಷ್ಣಯ್ಯರ್ ನೀಡಿದ್ದ ತೀರ್ಪನ್ನು 8:1 ಬಹುಮತದೊಂದಿಗೆ ವಜಾ ಮಾಡಿದೆ. ಸಂವಿಧಾನದ ಆರ್ಟಿಕಲ್ 39(ಬಿ)ಪ್ರಕಾರ ಖಾಸಗಿಯವರ ಮಾಲೀಕತ್ವದ ಎಲ್ಲಾ ಸಂಪನ್ಮೂಲಗಳನ್ನು…

Read More

ಶ್ರೀ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ಲಕ್ಷದೀಪೋತ್ಸವ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕು ಶ್ರೀ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ಲಕ್ಷದೀಪೋತ್ಸವ ಕಾರ್ಯಕ್ರಮ ರವಿವಾರ ದಿನಾಂಕ 15-12-2024 ರಂದು ಸಾಯಂಕಾಲ 5 ಗಂಟೆಗೆ ವೀರಗಾಸೆ, ವೀರ ಪುರವಂತರು ಸಂಬಾಳ, ನಂದಿಕೋಲು, ಸಕಲ ವಾದ್ಯಗಳೊಂದಿಗೆ ‘ಮಹಾ ರಥೋತ್ಸವ’ವು ಜರುಗುವದು ಹಾಗೂ ಗುರುವಾರ ದಿನಾಂಕ 19-12-2024 ರಂದು ಸಾಯಂಕಾಲ 6:00 ಗಂಟೆಗೆ ಲಕ್ಷದೀಪೋತ್ಸವ ಕಾರ್ಯಕ್ರಮ ಜರುಗುವದು. ಪ್ರತಿವರ್ಷ ಜಾತ್ರೆಯ ಪ್ರಾರಂಭದ ಅಂಗವಾಗಿ ಶುಕ್ರವಾರ ದಿನಾಂಕ 06-12-2024 ರಂದು ಗೊಡಚಿ ಶ್ರೀವೀರಭದ್ರೇಶ್ವರ ದೇವಸ್ಥಾನದಿಂದ ವೀರಗಾಸೆ ವೀರಪುರವಂತರ ಸಮೇತವಾಗಿ…

Read More

ಬೆಳಗಾವಿ ತಹಶೀಲ್ದಾರ್ ಕಚೇರಿಯ ಚೇಂಬರ್ ನಲ್ಲೇ FDC ರುದ್ರೇಶ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ

ನಿನ್ನೆಯಷ್ಟೆ ರುದ್ರೇಶ್ ಅವರನ್ನು ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ತಹಶೀಲ್ದಾರ್ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ರಾಜಕೀಯ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಬಸವರಾಜ ನಾಗರಾಳ ಅವರ ಕಚೇರಿಯಲ್ಲಿ ಎಸ್ ಡಿಎ ರುದ್ರೇಶ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ…

Read More

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಸಭೆ

ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ ಜರುಗಿದ ಶತಮಾನೋತ್ಸವ ಸಮಿತಿಯ ಸಭೆಯ ಅಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ವಹಿಸಿ ಅವರು ಮಾತನಾಡಿದರು. ಶತಮಾನೋತ್ಸವ ಆಚರಣೆ ಬರೀ ಬೆಳಗಾವಿ ಕೇಂದ್ರೀಕೃತವಾಗಿರುವುದಿಲ್ಲ; ಪ್ರತಿಯೊಂದು ಕಾರ್ಯಕ್ರಮವು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ಅಧಿವೇಶನ ಹಾಗೂ ಗಾಂಧೀಜಿಯವರ ಜೀವನ ಸಾಧನೆ ಕುರಿತು ದೊಡ್ಡ ಪ್ರಮಾಣದಲ್ಲಿ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗುವುದು. ಎಲ್ಲ ವಿವಿದ ಜಿಲ್ಲೆಗಳಲ್ಲಿ ಗಾಂಧಿ ಅಧ್ಯಯನ ಕೇಂದ್ರ ಆರಂಭಿಸಬೇಕಿದೆ ಎಂದು ಪ್ರತಿಪಾದಿಸಿದ ಅವರು,…

Read More

ವಕ್ಛ್ ಹೆಸರಿನಲ್ಲಿ ಭೂ ಕಬಳಿಕೆಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರಕಾರಿ ಆಸ್ಪತ್ರೆಯ ಮುಂದಿನ ಹುತಾತ್ಮ ಚೌಕದಿಂದ ಆರಂಭಗೊಂಡ ಪ್ರತಿಭಟನೆ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಮಿನಿ ವಿಧಾನಸೌಧಕ್ಕೆ ತೆರಳಿ ಸಮಾವೇಶಗೊಂಡಿತು.ರೈತರ ಜಮೀನುಗಳನ್ನು ವಕ್ಪ ಹೆಸರಿನಲ್ಲಿ ದಾಖಲು ಮಾಡುವ ಕಾಂಗ್ರೆಸ್ ಸರಕಾರದ ಕ್ರಮವನ್ನು ಪಕ್ಷ ಸಹಿಸುವುದಿಲ್ಲ. ಕೂಡಲೇ ಸರಕಾರ ವಕ್ಪ ಮಂಡಳಿಯ ಹೆಸರಿನಲ್ಲಿರುವ ರೈತರ ಜಮೀನುಗಳನ್ನು ಮೂಲ ಮಾಲಕರ ಹೆಸರಿನಲ್ಲಿ ದಾಖಲು ಮಾಡಬೇಕು. ೧೯೫೨ ರಲ್ಲಿ ವಕ್ಪ ಮಂಡಳಿ ರಚನೆ ಮಾಡಿದಾಗ ಇಡೀ ದೇಶದಲ್ಲಿ ೧.೨೦ ಲಕ್ಷ ಎಕರೆ ಜಮೀನು ವಕ್ಪ ಹೆಸರಿನಲ್ಲಿ…

Read More

ನವೆಂಬರ 12 ರಂದು ಲೋಕಾಪೂರದಿಂದ ಧಾರವಾಡದವರೆಗೆ ರೈಲ್ವೆ ಮಾರ್ಗಕ್ಕಾಗಿ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಉತ್ತರ ಕರ್ನಾಟಕ ಅಭಿವೃದ್ಧಿಗೆ ಪೂರಕವಾದ ರೈಲ್ವೆ ಯೋಜನೆಗಳನ್ನು ಜಾರಿಗೆ ತರಬೇಕೆಂದು ಹಲವಾರು ಹೋರಾಟಗಳು ನಡೆದಿವೆ. ಅದರ ಭಾಗವಾಗಿ ರಾಮದುರ್ಗದಲ್ಲಿ 2005 ರಿಂದ ರಾಮದುರ್ಗದಿಂದ ಶಿರಸಂಗಿ ಕಾಳಮ್ಮದೇವಿ, ಸವದತ್ತಿ ಯಲ್ಲಮ್ಮ ಹಾಗೂ ಅಲ್ಲಿಂದ ಧಾರವಾಡದವರೆಗೆ ರೈಲ್ವೆ ಮಾರ್ಗ ಆಗಬೇಕೆಂದು ನಿರಂತರ ಹೋರಾಟಗಳು ನಡೆದಿವೆ. ರಾಮದುರ್ಗದಲ್ಲಿ ಹೋರಾಟ ನಡೆಯುತ್ತಿರುವ ಮೊದಲೇ ಬಾಗಲಕೋಟೆಯಲ್ಲಿ ರೈಲ್ವೆ ಮಾರ್ಗದ ಬೇಡಿಕೆ ಇಟ್ಟುಕೊಂಡು ಬಾಗಲಕೋಟದಿಂದ ಕುಡಚಿಯ ವರೆಗೆ ರೈಲ್ವೆ ಮಾರ್ಗ ಆಗಬೇಕೆಂದು ಸತತ ಹೋರಾಟದಿಂದ ಕೊನೆಗೂ ಕೇಂದ್ರ ರಾಜ್ಯ ಸರಕಾರಗಳು ಬಾಗಲಕೋಟದಿಂದ ಕುಡುಚಿಯವರೆಗೆ ರೈಲ್ವೆ ಮಾರ್ಗಕ್ಕೆ…

Read More

ಕನ್ನಡ ಚಿತ್ರರಂಗದ ನಿರ್ದೇಶಕ ಗುರುಪ್ರಸಾದ್ ಬೆಂಗಳೂರಿನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ

ಬೆಂಗಳೂರು: ಸ್ಯಾಂಡಲ್‌ವುಡ್‌ನ ನಿರ್ದೇಶಕ ಮತ್ತು ನಟ Guru Prasad (52) ಅವರು ಉತ್ತರ ಬೆಂಗಳೂರಿನ ದಾಸನಪುರದ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಮಠ, ಎದ್ದೇಳು ಮಂಜುನಾಥ, ಚಿತ್ರಗಳ ಮೂಲಕ ಖ್ಯಾತರಾಗಿರುವ ಕನ್ನಡ ಚಲನಚಿತ್ರ ನಿರ್ದೇಶಕ ಗುರುಪ್ರಸಾದ್ ಅವರು ಬೆಂಗಳೂರಿನ ಉತ್ತರ ಹೊರವಲಯದಲ್ಲಿರುವ ಖಾಸಗಿ ಅಪಾರ್ಟ್‌ಮೆಂಟ್‌ನ ಫ್ಲಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದ್ದಾರೆ. ಒಳಗಿನಿಂದ ಬೀಗ ಹಾಕಲಾಗಿದ್ದ ಅವರ ಫ್ಲಾಟ್‌ನಿಂದ ದುರ್ವಾಸನೆ ಬರಲಾರಂಭಿಸಿದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ನಲ್ಲಿದ್ದ ಅವರ ನೆರೆಹೊರೆಯವರು ಭಾನುವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು…

Read More