ಬೆಳಗಾವಿ ವಿಧಾನಮಂಡಳ ಚಳಿಗಾಲ ಅಧಿವೇಶನ: ಪೂರ್ವ ಸಿದ್ಧತೆ ಪರಿಶೀಲನಾ ಸಭೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಜರಗಿದ ಬೆಳಗಾವಿ ಚಳಿಗಾಲ ಅಧಿವೇಶನದ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ವಹಿಸಿ ಅವರು ಮಾತನಾಡಿದರು. ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಸಚಿವರು, ಶಾಸಕರುಗಳಿಗೆ ಯಾವುದೇ ರೀತಿಯ ಅನಾನೂಕುಲವಾಗದಂತೆ ನಿಗಾವಹಿಸಬೇಕು. ಅಧಿವೇಶನಕ್ಕೆ ಬರುವಂತಹ ಸಚಿವರು, ಶಾಸಕರು, ಸಚಿವಲಾಯದ‌ ಅಧಿಕಾರಿ, ಸಿಬ್ಬಂದಿಗಳು, ಚಾಲಕರಿಗೆ ಹಾಗೂ ಪೋಲಿಸ್ ಅಧಿಕಾರಿ ಸಿಬ್ಬಂದಿಗಳಿಗೆ ವ್ಯವಸ್ಥಿತ ವಸತಿ, ಊಟೊಪಹಾರದ ವ್ಯವಸ್ಥೆಯಾಗಬೇಕು ಎಂದರು. ಸುವರ್ಣ ಸೌಧದ ಪ್ರವೇಶದ್ವಾರದಲ್ಲಿ ಜನ ಹಾಗೂ ಸಂಚಾರ ದಟ್ಟಣೆ ಆಗದಂತೆ…

Read More

ಬೆಟಗೇರಿ ಗ್ರಾಮದಲ್ಲಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ದ್ವಿಚಕ್ರ ವಾಹನಗಳು ನಾಶ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಳೆದ ಸುಮಾರು ನಾಲ್ಕೆöದು ದಿನಗಳಿಂದ ಹಗಲು-ರಾತ್ರಿ ಸುಮಾರು ಗಂಟೆಗಳ ಕಾಲ ಆಗಾಗ ಮಳೆ ಜೋರಾಗಿ ಸುರಿಯುತ್ತಿದ್ದು, ಗುರುವಾರ ರಾತ್ರಿ ಸುರಿದ ಮಳೆಗೆ ಬೆಟಗೇರಿ ಗ್ರಾಮದ ಮನೆಯೊಂದರ ಗೋಡೆ ಪಕ್ಕದಲ್ಲಿ ನಿಲ್ಲಿಸಿದ ಎರಡು-ಮೂರು ದ್ವಿಚಕ್ರ ವಾಹನಗಳ ಮೇಲೆ ಮನೆಯ ಗೋಡೆ ಕುಸಿದು ನಾಶಗೊಂಡಿವೆ.ಮನೆ ಗೋಡೆಯ ಕಲ್ಲು ಮಣ್ಣು ದ್ವಿಚಕ್ರ ವಾಹನಗಳ ಮೇಲೆ ಬಿದ್ದು ದ್ವಿಚಕ್ರ ವಾಹನಗಳು ನಾಶವಾಗಿವೆ. ಹೀಗಾಗಿ ಗ್ರಾಮದ ಓಣಿ ರಸ್ತೆ ಮೇಲೆ ಮಕ್ಕಳು, ಸ್ಥಳೀಯರು ಜೀವ ಭಯದಲ್ಲಿ ಓಡಾಡುವಂತಾಗಿದೆ.ಸುಮಾರು ನಾಲ್ಕೆöದು…

Read More

ಬಸಿಡೋನಿ ಗ್ರಾಮದಲ್ಲಿ ಹದಗೆಟ್ಟ ರಸ್ತೆ : ಯಾಮಾರಿದರೆ ಯಮಲೋಕ ದರ್ಶನ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಗೊರಬಾಳ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಸಿಡೋನಿ ಗ್ರಾಮದಲ್ಲಿ ರಸ್ತೆ ತುಂಬ ಗುಂಡಿಮಯ ಯಾಮಾರಿದರೆ ಯಮಲೋಕ ದರ್ಶನ ಗ್ಯಾರಂಟಿ ಗ್ರಾಮದ ಕೆಲ ಪ್ರಮುಖ ರಸ್ತೆಗಳು ಸೇರಿದಂತೆ ಒಳ ರಸ್ತೆಗಳಲ್ಲಿ ರಸ್ತೆಗಳನ್ನು ಹುಡುಕಿ ವಾಹನ ಸಂಚಾರ ಮಾಡಬೇಕಾದ ಪರಿಸ್ಥಿತಿ ಇದೆ. ರಸ್ತೆ ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಗೆ ಅಧಿಕಾರಿಗಳು ಇನ್ನೂ ಮನಸ್ಸು ಮಾಡಿಲ್ಲ. ಹೀಗಾಗಿ ರಸ್ತೆ ಮಧ್ಯೆ ದೊಡ್ಡ ಗುಂಡಿಗಳು ನಿರ್ಮಾಣವಾಗಿ ಸಂಚಾರಕ್ಕೆ ಅಸಾಧ್ಯದ ಪರಿಸ್ಥಿತಿ ತಂದೊಡ್ಡಿವೆ. ನೀರು ರಸ್ತೆಯಲ್ಲೇ ನಿಲ್ಲುತ್ತಿದೆ. ರಸ್ತೆಗಳು ತೀವ್ರ…

Read More

ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊರಳಿಗೆ ಮತ್ತೊಂದು ಬೃಹತ್ ಭೂ ಹಗರಣದ ಕುಣಿಕೆ

RMV 2ನೇ ಹಂತದ ಬಡಾವಣೆ ನಿರ್ಮಾಣಕ್ಕೆಂದು BDA ಭೂ ಸ್ವಾಧೀನ ಪಡಿಸಿಕೊಂಡಿದ್ದ ಭೂಪಸಂದ್ರ ಗ್ರಾಮದ ಸರ್ವೆ ನಂ: 20 ಮತ್ತು 21 ರ 6.26 ಎಕರೆ ಸ್ವತ್ತನ್ನು De – notification ಮಾಡಿರುವ ಸಿದ್ಧರಾಮಯ್ಯ ಮತ್ತಿತರರ ವಿರುದ್ಧ ಪ್ರಕರಣ ದಾಖಲು. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ತಮ್ಮ ಸ್ವಾರ್ಥಕ್ಕಾಗಿ ಕಾನೂನುಬಾಹಿರವಾಗಿ ₹ 400 ಕೋಟಿ ರೂ. ಗಳಿಗೂ ಹೆಚ್ಚು ಮೌಲ್ಯದ BDA ಸ್ವತ್ತನ್ನು De-notification ಮಾಡಿರುವ ಸಿದ್ಧರಾಮಯ್ಯ 400 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ BDA ಸ್ವತ್ತನ್ನು ಕಾನೂನಿನ…

Read More

ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಯನ್ನು ನವೆಂಬರ್ 05 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದು. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಹಾಗೂ ಡಿಎಸ್‌ಎಲ್‌ಆರ್‌ ಕ್ಯಾಮೆರಾವನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು….

Read More

ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ; ಬಾಗಿನ ಅರ್ಪಣೆ ಕಾರ್ಯಕ್ರಮ

ಮಲಪ್ರಭಾ ನೀರಾವರಿ ಸಲಹಾ ಸಮಿತಿ ವತಿಯಿಂದ ಮಂಗಳವಾರ ನವಿಲುತೀರ್ಥ ಅಣೆಕಟ್ಟು ಸ್ಥಳದಲ್ಲಿ ಗಂಗಾ ಪೂಜೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ನೆರವೇರಿಸಿ, ಬಾಗಿನ ಅರ್ಪಿಸಿ ಬಳಿಕ ನವಿಲುತೀರ್ಥದ ನವೀಕೃತ ಪ್ರವಾಸಿ ಮಂದಿರದ ಕಟ್ಟಡವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನವಿಲುತೀರ್ಥ ಡ್ಯಾಂ ಉತ್ತರ ಕರ್ನಾಟಕದ ರೈತರ ಜೀವ “ಮಲಪ್ರಭಾ ಜಲಾಶಯ” ಭರ್ತಿಯಾಗಿರುವ ಶುಭ ಸಂದರ್ಭದಲ್ಲಿ ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ ಹಾಗೂ “ಬಾಗಿನ…

Read More

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಹೃದಯಾಘಾತ ತಡೆಯಲು ಉಚಿತ ಇಂಜೆಕ್ಷನ್ ಪಡೆದುಕೊಳ್ಳಿ : ಡಾ. ನವೀನ್ ನಿಜಗುಲಿ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಸಾರ್ವಜನಿಕ ಆಸ್ಪತ್ರೆ ಕಚೇರಿಯಲ್ಲಿ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲೇ ಹಠಾತ್ ಹೃದಯಘಾತ ಆಗದಂತೆ ಜೀವರಕ್ಷಕ ಚುಚ್ಚುಮದ್ದುಗಳನ್ನ ನೀಡುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಹೃದಯಾಘತಗಳನ್ನ ತಡೆಯಲು ಈ ಯೋಜನೆ ಮಹತ್ವದ್ದಾಗಿದ್ದು, ಯಾರಿಗೇ ಎದುನೋವು ಕಾಣಿಸಿಕೊಂಡಾಗ ನಿರ್ಲಕ್ಷ್ಯೆ ಮಾಡದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಇಸಿಜಿ ಮಾಡಿಸಿಕೊಳ್ಳಿ ಹೃದಯಾಘಾತ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ 32 ಸಾವಿರ ರೂಪಾಯಿ ಬೆಲೆ ಬಾಳುವ ದುಬಾರಿ ಬೆಲೆಯ ಚುಚ್ಚುಮದ್ದು ಟೆನೆಕ್ಟೆಪ್ಲೇಸ್ ಅನ್ನ ತಾಲೂಕ…

Read More

ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್; ಅಧಿಕೃತ ಘೋಷಣೆ

ಸತತ 11 ವರ್ಷಗಳ ಕಾಲ ‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋ ನಡೆಸಿಕೊಟ್ಟ ಸುದೀಪ್​ ಅವರು ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದೇ ತಮ್ಮ ಕೊನೆಯ ಸೀಸನ್​ ಎಂದು ಅವರು ಘೋಷಿಸಿದ್ದಾರೆ. ಈ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಕಾರ್ಯಕ್ರಮದ ನಡುವೆಯೂ ಸುದೀಪ್​ ಅವರು ಶಾಕಿಂಗ್ ಸುದ್ದಿ ನೀಡಿದ್ದಾರೆ.ಕಿಚ್ಚ ಸುದೀಪ್​ ಅವರು ‘ಬಿಗ್​ ಬಾಸ್​ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಯಶಸ್ವಿಯಾಗಿ…

Read More

ಸವದತ್ತಿ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ತಿರುಪತಿ ಮಾದರಿಯನ್ನು ಅಧ್ಯಯನ ಮಾಡಿಕೊಂಡು‌ ಅದೇ ಮಾದರಿಯಲ್ಲಿ ಮೂಲಸೌಕರ್ಯ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ದೇವಸ್ಥಾನಕ್ಕೆ ಪ್ರತಿವರ್ಷ ಕೋಟ್ಯಂತರ ಭಕ್ತಾಧಿಗಳು ಭೇಟಿ ನೀಡುವುದರಿಂದ ಉತ್ತಮ ವಸತಿ ಹಾಗೂ ಸುಗಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಇತರೆ ಮೂಲಸೌಕರ್ಯ ಒದಗಿಸುವುದು ಸರಕಾರದ ಪ್ರಥಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಗೋವಾ ರಾಜ್ಯಗಳಿಂದ ಆಗಮಿಸುವ…

Read More

ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಧಾರವಾಡ ಭಾರತೀಯ ಹವಾಮಾನ ಇಲಾಖೆ ವರದಿಯಂತೆ ವಾಯುಭಾರ ಕುಸಿತದಿಂದ ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರಿಂದ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹದ ಮುನ್ಸೂಚನೆ ಇದ್ದು, ಜಿಲ್ಲೆಯ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡದಂತೆ ಆದೇಶಿಸಿದ್ದಾರೆ. ಈ ಕುರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲೆಯ ಎಲ್ಲ ತಾಲ್ಲೂಕಿನ ಅಧಿಕಾರಿಗಳಿಗೆ ಪ್ರಭಾರ ಜಿಲ್ಲಾಧಿಕಾರಿಗಳಾಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ ಅವರು ತಿಳಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಸತತ ಮಳೆ ಸುರಿಯುತ್ತಿದ್ದು…

Read More