ಬೆಳಗಾವಿ ವಿಧಾನಮಂಡಳ ಚಳಿಗಾಲ ಅಧಿವೇಶನ: ಪೂರ್ವ ಸಿದ್ಧತೆ ಪರಿಶೀಲನಾ ಸಭೆ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಜರಗಿದ ಬೆಳಗಾವಿ ಚಳಿಗಾಲ ಅಧಿವೇಶನದ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ವಹಿಸಿ ಅವರು ಮಾತನಾಡಿದರು. ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಸಚಿವರು, ಶಾಸಕರುಗಳಿಗೆ ಯಾವುದೇ ರೀತಿಯ ಅನಾನೂಕುಲವಾಗದಂತೆ ನಿಗಾವಹಿಸಬೇಕು. ಅಧಿವೇಶನಕ್ಕೆ ಬರುವಂತಹ ಸಚಿವರು, ಶಾಸಕರು, ಸಚಿವಲಾಯದ ಅಧಿಕಾರಿ, ಸಿಬ್ಬಂದಿಗಳು, ಚಾಲಕರಿಗೆ ಹಾಗೂ ಪೋಲಿಸ್ ಅಧಿಕಾರಿ ಸಿಬ್ಬಂದಿಗಳಿಗೆ ವ್ಯವಸ್ಥಿತ ವಸತಿ, ಊಟೊಪಹಾರದ ವ್ಯವಸ್ಥೆಯಾಗಬೇಕು ಎಂದರು. ಸುವರ್ಣ ಸೌಧದ ಪ್ರವೇಶದ್ವಾರದಲ್ಲಿ ಜನ ಹಾಗೂ ಸಂಚಾರ ದಟ್ಟಣೆ ಆಗದಂತೆ…
