ರಾಮದುರ್ಗದಲ್ಲಿ ಹಾರೂಗೇರಿ ಪ್ರಗತಿ ಕ್ರೆಡಿಟ್ ಸೌಹಾರ್ದ ಸಂಘದ ನೂತನ ಶಾಖೆಯನ್ನು ಶ್ರೀ ಚಂದ್ರಶೇಖರ ಸ್ವಾಮೀಜಿ ಹಾಗೂ ಗಣ್ಯರು ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಹಾರೂಗೇರಿಯ ಪ್ರಗತಿ ಕ್ರೆಡಿಟ್ ಸೌಹಾರ್ದ ಸಂಘ ನಿ, ಇದರ 6ನೇ ನೂತನ ಶಾಖೆಯನ್ನು ಮುಳ್ಳೂರ ಅನ್ನದಾನೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು. ಈ ವೇಳೆ ಹಾರೂಗೇರಿಯ ಶರಣ ವಿಚಾರ ವಾಹಿನಿ ಅಧ್ಯಕ್ಷ ಶ್ರೀ ಐ.ಆರ್. ಮಠಪತಿ ಮಾತನಾಡಿದ ಅವರು 1904 ರಲ್ಲಿ ದಿ. ಸಿದ್ದನಗೌಡ ಪಾಟೀಲ ಅವರು ಹುಟ್ಟು ಹಾಕಿದ ಸಹಕಾರ ಸಂಘಗಳು ಇಂದು ಹೆಮ್ಮರವಾಗಿ ಬೆಳೆದು ನಿಂತಿವೆ ಎಂದು ಹರ್ಷವ್ಯಕ್ತಪಡಿಸಿದರು.ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ನೂತನ…
