ಕಾಂಗ್ರೆಸ್ ಸರ್ಕಾರದ ಕೊನೆಯದಾದ ಮಹತ್ವಾಕಾಂಕ್ಷೆಯ ಪಂಚಖಾತ್ರಿ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು

ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು. ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ. ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ…

Read More

ಬೆಳಗಾವಿ ಜಿಲ್ಲಾ ಪಂಚಾಯತ್ ನೂತನ ಸಿಇಒ ರಾಹುಲ್ ಸಿಂಧೆ ನೇಮಕ‌

ಈ‌ ಹಿಂದಿನ ಸಿಇಒ ಹರ್ಷಲ್ ಬೋಯರ್ ಅವರನ್ನು‌ ಬೆಂಗಳೂರಿನ ಅಟಲ್ ಜನಸ್ನೇಹಿ‌ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ತೆರವಾದ ಸ್ಥಾನಕ್ಕೆ ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ‌ ಆಗಿದ್ದ ರಾಹುಲ್ ಸಿಂಧೆ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯತಿ ನೂತನ ಸಿಇಒ‌ ಆಗಿ ನೇಮಕ‌ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More

ದಾರವಾಡದ ವಿದ್ಯಾನಗರಿಯಲ್ಲಿ ರಾಮನ ಧ್ವಜದ ತಯಾರಿ‌ ನಡಿತಾ ಇದೆ

ಧಾರವಾಡದ ವಿದ್ಯಾನಗರಿಯಲ್ಲಿ ರಾಮನ ಧ್ವಜದ ತಯಾರಿ‌ ಜೋರಾಗಿ ನಡಿತಾ ಇದ್ದು ಇವಾಗ 3 ಲಕ್ಷ ರಾಮ ಧ್ವಜ ದಕ್ಷಿಣದ 4 ರಾಜ್ಯಗಳಿಂದ ಆರ್ಡರ್‌ ಬಂದಿದೆಜನವರಿ 22ಕ್ಕೆ ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ನಡೆದರೆ ಮನೆ ಮನೆಗಳಲ್ಲಿ ರಾಮನ ಧ್ವಜ ಹಾರಲಿದೆ. ಈ ಕಾರಣಕ್ಕೆ ವಿದ್ಯಾನಗರಿ ಧಾರವಾಡದಲ್ಲಿ ರಾಮನ ಧ್ವಜದ ತಯಾರಿ‌ ಜೋರಾಗಿ ನಡೆಯುತ್ತಿದೆ. ನಗರದ ಮರಾಠ ಗಲ್ಲಿಯಲ್ಲಿರುವ ಪ್ರತೀಶ್ ಜಾಧವ್‌ ಅವರಿಗೆ ಈಗಾಗಲೇ ರಾಮ, ಹನುಮಂತನ 3 ಲಕ್ಷ ಧ್ವಜ ಬೇಕೆಂದು ಆರ್ಡರ್‌ ಬಂದಿದೆ. ಕಳೆದ…

Read More

ಹುಕ್ಕೇರಿಯಲ್ಲಿ ಅಕ್ರಮ ಪಡಿತರ ದಾಸ್ತಾನು ಮೇಲೆ ದಾಳಿ 7.14 ಲಕ್ಷ ಮೌಲ್ಯದ 420 ಚೀಲಗಳುಳ್ಳ 210 ಕ್ವಿಂಟಲ್ ಪಡಿತರ ಅಕ್ಕಿ ವಶ

ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರುಹುಕ್ಕೇರಿ ಪಟ್ಟಣ ಹೊರವಲಯದ ಬಸ್ತವಾಡ ರಸ್ತೆ ಬಳಿಯ ತೋಟದ ಮನೆಯೊಂದರ ಮೇಲೆ ದಾಳಿ ನಡೆಸಿದರು. ದಾಳಿ ವೇಳೆ ಅಕ್ರಮವಾಗಿ ಕೂಡಿಟ್ಟ7.14 ಲಕ್ಷ ಮೌಲ್ಯದ 420 ಚೀಲಗಳುಳ್ಳ 210ಕ್ವಿಂಟಲ್ ಪಡಿತರ ಅಕ್ಕಿ ಹಾಗೂ 15 ಲಕ್ಷ ಬೆಲೆಬಾಳುವಲಾರಿ ವಶಪಡಿಸಿಕೊಂಡುಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ.ಹುಕ್ಕೇರಿ ಪಟ್ಟಣದ ರವಿ ಶಿವಾನಂದ ಗಜಬರ ಹಾಗೂ ರಾಯಬಾಗ ತಾಲೂಕು ನಿಪನಾಳ ಗ್ರಾಮದ ಲಾರಿ ಚಾಲಕ ಸಂತೋಷ ಶಿವಾಜಿ ಕುರಣಿ ಎಂಬುವವರ ಮೇಲೆದೂರು ದಾಖಲಾಗಿದೆ.ಆರೋಪಿ ರವಿ…

Read More

ಲೋಕಾಯುಕ್ತ ಇಲಾಖೆ ಹಮ್ಮಿಕೊಂಡ ಜನ ಸಂಪರ್ಕ ಸಭೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ ಸಭಾ ಭವನದಲ್ಲಿ ಲೋಕಾಯುಕ್ತ ಇಲಾಖೆ ಹಮ್ಮಿಕೊಂಡ ಜನ ಸಂಪರ್ಕ ಸಭೆಯಲ್ಲಿ ಎಸ್ಪಿ ಹನಮಂತರಾಯ ಅವರು ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಾರ್ವಜನಿಕರು ತಮ್ಮ ಏನೇ ಸಮಸ್ಯೆಗಳಿದ್ದರು ಜನ ಸಂಪರ್ಕ ಸಭೆಯಲ್ಲಿ ಅಷ್ಟೇ ಅಲ್ಲದೆ ನೇರವಾಗಿ ನಮ್ಮ ಬೆಳಗಾವಿ ಕಛೇರಿಗೆ ಬಂದು ನಮ್ಮಗೆ ದೂರು ನೀಡಬಹುದು. ಅಷ್ಟೇ ಅಲ್ಲದೆ ತಮಗೆ ಆದ ತೊಂದರೆಯನ್ನು ಸಾರ್ವಜನಿಕರು ಕಛೇರಿಯ ದೂರವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ತಮ್ಮ ಸಮಸ್ಯೆ ಮತ್ತು…

Read More

ಶಾಲೆಗಳಲ್ಲಿ ವಾರ್ಷಿಕೋತ್ಸವ ಆಚರಣೆ ಮತ್ತು ಇತರೆ ‌ಸಾಂಸ್ಕ್ರೃತಿಕ ಕಾರ್ಯಕ್ರಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಡೆಸುವಂತೆ ಒತ್ತಾಯಿಸಿ….

ಕೋಲಾರ: ಸರ್ಕಾರಿ , ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲೆಗಳಲ್ಲಿ ವಾರ್ಷಿಕೋತ್ಸವ ಆಚರಣೆ ಮತ್ತು ಇತರೆ ‌ಸಾಂಸ್ಕ್ರೃತಿಕ ಕಾರ್ಯಕ್ರಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಡೆಸುವಂತೆ ಒತ್ತಾಯಿಸಿ ಕನ್ನಡ ಸೇನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಶಿಕ್ಷಣಾಧಿಕಾರಿ ಸಹಿರಾ ಅಂಜಂ ರವರ ಮೂಲಕ ಡಿಡಿಪಿಐ ರವರಿಗೆ ಮನವಿ ಸಲ್ಲಿಸಲಾಯಿತು.ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಮಾತನಾಡಿ, ಸರ್ಕಾರಿ ಹಾಗೂ ಖಾಸಗಿ ಶಾಲೆ, ಕಾಲೇಜುಗಳಲ್ಲಿ ವಾರ್ಷಿಕೋತ್ಸವ ಹಾಗೂ ಇತರೆ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡೆಗಣಿಸಿ ಪರ ಭಾಷೆಗಳಾದ ತಮಿಳು, ತೆಲುಗು ಇತರೆ…

Read More

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

ಬೆಂಗಳೂರು, ಜನವರಿ 07 : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ ಮನವಿ ಸಲ್ಲಿಸಿದರು.ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು.ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ವರದಿ ನೀಡಲು ಎರಡು ತಿಂಗಳ ಕಾಲ ಅವಧಿ ವಿಸ್ತರಣೆ ಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು…

Read More

ರಾಜ್ಯದ ರೈತರಿಗೆ ಗುಡ್ ನ್ಯೂಸ್

Farmers: ರಾಜ್ಯದ ರೈತರಿಗೆ ಸರ್ಕಾರದಿಂದ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ (farmers) ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದು ಬಸ್ತು ಸೇವಾ ಶುಲ್ಕವನ್ನು ಇಳಿಕೆ ಮಾಡಿ ಆದೇಶವನ್ನು ಹೊರಡಿಸಿದೆ. ಸ್ವಾವಲಂಬಿ ಯೋಜನೆ ಅಡಿ ಜಮೀನು ನಕ್ಷೆಗಾಗಿ (ಸ್ಕೆಚ್) ಸಲ್ಲಿಸುವ ಪ್ರತಿ ಅರ್ಜಿಗೆ ನಿಗದಿ ಪಡಿಸಿದ ಪರಿಷ್ಕೃತ ಶುಲ್ಕ ಈ ಕೆಳಗಿನಂತಿದೆ.* 2 ಎಕರೆ ವರೆಗೆ 2,500 ರೂ. (ನಗರ), 1,500 ರೂ. (ಗ್ರಾಮೀಣ)* 2 ಎಕರೆ ನಂತರ ಪ್ರತಿ ಎಕರೆಗೆ 1,000 ರೂ. (ನಗರ),…

Read More

ಒಂದು ವರ್ಷಕ್ಕೆ ರಾಜ್ಯಕ್ಕೆ ಬರಬೇಕಾದ 14 ಸಾವಿರ ಕೋಟಿ ರೂ. ಪಾಲು ಕುಂಟಿತ: ಕೃಷ್ಣ ಭೈರೇಗೌಡ

ವಿಧಾನಸೌಧದಲ್ಲಿ ಸಂಪುಟ ಸಭೆ(Cabinet Meeting) ನಂತರ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ‘ರಾಜ್ಯದ ಪರ ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. 4 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ. ಆದರೆ, ಅದರಲ್ಲಿ ರಾಜ್ಯಕ್ಕೆ 60-70 ಸಾವಿರ ಕೋಟಿ ಮಾತ್ರ ಬರುತ್ತಿದೆ ಎಂದರು. ಬೆಂಗಳೂರು, ಜ.05: 16ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಅಧಿಸೂಚನೆ ಹೊರಡಿಸಿದೆ. ಈ ಹಿನ್ನಲೆ  ಹಣಕಾಸು ಆಯೋಗದ ಮುಂದೆ ಏನು ವಾದ ಮಂಡಿಸಬೇಕೆಂದು ಚರ್ಚೆಯಾಗಿದೆ ಎಂದು ಕಂದಾಯ…

Read More

ಕನ್ನಡ ನಾಮ ಫಲಕ ಶೇಕಡ 60 ರಷ್ಟು ಹಾಗೂ ಕನ್ನಡ ಹೋರಾಟಗಾರರನ್ನು ಬೇಷರತ್ತಿನ ಮೇಲೆ ಬಿಡುಗಡೆಗೊಳಿಸಿ.

ಕರ್ನಾಟಕದಲ್ಲಿ ಎಲ್ಲಾ ಕಾರ್ಖಾನೆ ಮತ್ತು ಅಂಗಡಿ ಮುಂಗಟ್ಟುಗಳ ಮೇಲೆ ಶೇಕಡ 60 ರಷ್ಟು ಕನ್ನಡ ನಾಮಫಲಕ ಅಳವಡಿಸಬೇಕು ಮತ್ತು ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವ ರಾಜ್ಯ ಸರ್ಕಾರ ಈ ಕೂಡಲೇ ಬೇಷರತ್ತು ಮೂಲಕ ಬಿಡುಗಡೆಗೊಳಿಸಬೇಕು. ಕಳ್ಳತನ, ಕೊಲೆ ಮಾಡಿದಂತಹ ಕಟುಕರಿಗೆ ಬೆಳಿಗ್ಗೆ ಠಾಣೆಗೆ ಕರೆದುಕೊಂಡು ಸಂಜೆ ಬಿಡುಗಡೆ ಮಾಡುತ್ತಾರೆ. ನಾಡು, ನುಡಿ, ಜಲ ಭಾಷೆಗಾಗಿ ಹೋರಾಟ ಮಾಡಿದಂತಹ ಕನ್ನಡಿಗರಿಗೆ ಜೈಲು ಶಿಕ್ಷೆ ನೀಡಿರುತ್ತೀರಿ. ಇದು ಸರಿನಾ, ಎಲ್ಲಿದೆ ನ್ಯಾಯ. ಆದ್ದರಿಂದ ಈ ಕೂಡಲೇ ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು….

Read More