ಹಿರೇಕೊಪ್ಪ ಕೆ.ಎಸ್ ಗ್ರಾಮದಲ್ಲಿ ಹಳ್ಳಕ್ಕೆ ಬ್ರೀಡ್ಜ ಕಂ. ಬ್ಯಾರೇಜ್ ನಿರ್ಮಾಣಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಿರೇಕೊಪ್ಪ ಕೆ.ಎಸ್ ಗ್ರಾಮದಲ್ಲಿ 2 ಕೋಟಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ಅನುದಾನದ ಅಡಿಯಲ್ಲಿ ಖಬರಸ್ಥಾನದ ಹತ್ತಿರ ಇರುವ ಹಳ್ಳಕ್ಕೆ ಬ್ರೀಡ್ಜ್ ಕಂ. ಬ್ಯಾರೇಜ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ತಾಲೂಕಿನ ಸಮಗ್ರ ಅಭಿವೃದ್ದಿ ಪಡೆಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಹಂತ ಹಂತವಾಗಿ ಸರಕಾರದಿಂದ ಅನುದಾನ ಮಂಜೂರಾದ ತಕ್ಷಣ ಎಲ್ಲಾ ಕಾಮಗಾರಿ ಕೈಗೊಳ್ಳಲು ಕ್ರಮ ವಹಿಸಲಾಗುವದು. ಸರಕಾರದಿಂದ ದೊರೆತ ಅನುದಾನ ಸದ್ಭಳಕೆಯಾಗಲು ಸಂಬಂಧಪಟ್ಟ ಇಲಾಖೆಯ…

Read More

4 ನೂತನ ಕಸ ವಿಲೇವಾರಿ ವಾಹನಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಆವರಣದಲ್ಲಿ 4 ನೂತನ ಕಸ ವೀಲೇವಾರಿ ವಾಹನಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ಪಟ್ಟಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಬಿ.ರಂಗನ್ ಗೌಡ, ಪುರಸಭೆ ಮುಖ್ಯಾಧಿಕಾರಿ ಐ ಕೆ ಗುಡದಾರಿ,ಪುರಸಭೆ ಸದಸ್ಯ ದುರ್ಗಪ್ಪ ಬಂಡಿವಡ್ಡರ, ನಗರ ಘಟಕ ಅಧ್ಯಕ್ಷ ಶೇಖರ್ ಸಿದ್ದಲಿಂಗಪ್ನವರ್, ಸುರೇಶ್ ಪತ್ತೆಪುರ್, ಜಹೂರ ಹಾಜಿ, ಪುರಸಭೆ ಎಲ್ಲ ಸಿಬ್ಬಂದಿಗಳು ಹಾಗೂ ಸದಸ್ಯರು…

Read More

ಹುಬ್ಬಳ್ಳಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಇಬ್ಬರು ನಟೋರಿಯಸ್ ದರೋಡೆಕೋರರು

ಹುಬ್ಬಳ್ಳಿಯ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಉದ್ಯಮಿ ದರೋಡೆ ಪ್ರಕರಣವನ್ನು ಬೆನ್ನತ್ತಿದ್ದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧನ ಮಾಡಿ ಪಂಚನಾಮೆ ನಡೆಸುವಂತ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಇಬ್ಬರು ನಟೋರಿಯಸ್ ದರೊಡೆಕೋರರ ಮೇಲೆ ಸಿಸಿಬಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಭರತ್,ಹಾಗೂ ಪಾರೂಕ್ ಎಂಬಾತರೇ ಗುಂಡೇಟು ತಿಂದ ನಟೋರಿಯಸ್ ದರೊಡೆಕೋರರಾಗಿದ್ದರೆ ಕಳೆದ ಅಕ್ಟೋಬರ್ 24 ರಂದು ಹುಬ್ಬಳ್ಳಿಯ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೇ ಸ್ಟೇಶನ್ ಬಳಿಯ ಬೋಗಿ ಬೋಗಿ ರೆಸ್ಟೋರೆಂಟ್ ಬಳಿ ಈ ಗ್ಯಾಂಗ್…

Read More

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಮಂಜೂರಾತಿಗೆ ಪರಿಗಣಿಸಲು ಕರ್ನಾಟಕ ಕ್ಯಾಬಿನೆಟ್ ಸರ್ಕಾರಕ್ಕೆ ಶಿಫಾರಸು ಮಾಡಿದೆ

ದೂರಿನ ಪ್ರಕಾರ, ಬೆಂಗಳೂರು Bengaluru ಅಭಿವೃದ್ಧಿ ಪ್ರಾಧಿಕಾರದ ಟರ್ನ್‌ಕೀ ವಸತಿ ಯೋಜನೆಗೆ ಖಾಸಗಿ ಕಂಪನಿಯೊಂದಕ್ಕೆ ಅನುಮತಿ ನೀಡಲು 12 ಕೋಟಿ ರೂಪಾಯಿ ಲಂಚ ಕೇಳಿದ್ದರಲ್ಲಿ ಭ್ರಷ್ಟಾಚಾರ ನಡೆದಿದೆ. ಸರ್ಕಾರಿ ಗುತ್ತಿಗೆಗಳಲ್ಲಿ ಕಂಪನಿಯೊಂದಕ್ಕೆ ಅನುಕೂಲ ಮಾಡಿಕೊಡಲು ಮಾಜಿ ಸಿಎಂ ಬೃಹತ್ ಮೊತ್ತದ ಲಂಚ ಕೇಳಿದ್ದಾರೆ ಎನ್ನಲಾದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ( B.S.Yediyurappa ) ಅವರ ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ನಿರಾಕರಿಸುವ ನಿರ್ಧಾರವನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್…

Read More

KEA VAO ಫಲಿತಾಂಶ 2024 ಪ್ರಕಟಿಸಲಾಗಿದೆ, ಕರ್ನಾಟಕ VAO ಜಿಲ್ಲಾವಾರು ಕಟ್ ಆಫ್ ಮಾರ್ಕ್ಸ್ ಮತ್ತು ಮೆರಿಟ್ ಪಟ್ಟಿಯನ್ನು ಪರಿಶೀಲಿಸಿ

ಅಕ್ಟೋಬರ್ 27, 2024 ರಂದು ನಡೆದ ವಿಲೇಜ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (VAO) ಲಿಖಿತ ಪರೀಕ್ಷೆ 2024 ರ ಫಲಿತಾಂಶಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಸಾವಿರಾರು ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು, VAO ಹುದ್ದೆಯನ್ನು ಪಡೆಯಲು ಆಶಿಸುತ್ತಿದ್ದಾರೆ. ಕರ್ನಾಟಕ. ಕರ್ನಾಟಕ VAO ಫಲಿತಾಂಶ ಪ್ರಕಟಣೆಯನ್ನು KEA ಅಧಿಕೃತ ವೆಬ್‌ಸೈಟ್-cetonline.karnataka.gov.in/kea ನಲ್ಲಿ ಮಾಡಲಾಗುತ್ತದೆ. ಒಮ್ಮೆ ಬಿಡುಗಡೆಯಾದ ನಂತರ, ಫಲಿತಾಂಶವು ಅಭ್ಯರ್ಥಿಗಳ ಅಂಕಗಳು ಮತ್ತು ಡಾಕ್ಯುಮೆಂಟ್ ಪರಿಶೀಲನೆಯಂತಹ ಮುಂದಿನ ಸುತ್ತುಗಳಿಗೆ ಅರ್ಹತೆಯ ಸ್ಥಿತಿಯನ್ನು ಒಳಗೊಂಡಿರುತ್ತದೆ. ಬಿಡುಗಡೆಯ…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಪರಿಶೀಲಿಸಿದರು.

ಬೆಳಗಾವಿ ನಂದಗಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯದಲ್ಲಿ ಮಂಗಳವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಮಾತನಾಡಿದರು. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ನಂದಗಡ ಮ್ಯೂಸಿಯಂ ಸೇರಿ ಒಟ್ಟು 261 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 59 ಕೋಟಿ ವೆಚ್ಚದಲ್ಲಿ ಒಟ್ಟು 13 ಎಕರೆ ಜಾಗೆಯಲ್ಲಿ ನಂದಗಡ ಮ್ಯೂಸಿಯಂ…

Read More

ಹಲಗತ್ತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮನೆ ಮನದಲ್ಲಿ ವೇಮನ 174ನೇ ಮಾಸಿಕ ತತ್ವ ಚಿಂತನ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿ ಮಾತನಾಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಲ್ಲಿ ಹೇಮ ವೇಮ ಸೇವಾ ಸಮಿತಿಯ ಆಶ್ರಯದಲ್ಲಿ ಬೆನಕಟ್ಟಿಯ ಹೇಮ ವೇಮನ ಸದ್ಬೋಧನ ಪೀಠ ಹಮ್ಮಿಕೊಂಡಿದ್ದ ಮನೆ ಮನದಲ್ಲಿ ವೇಮನ 174ನೇ ಮಾಸಿಕ ತತ್ವ ಚಿಂತನ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ವೇಮನರ ವಚನ ಕುರಿತು ಬಾಗಲಕೋಟದ ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿಚಿಂತನ ನಡೆಸಿ ಅವರು ಮಾತನಾಡಿದರು.ನಾವಾಡುವ ಮಾತು, ಕೃತಿ ಒಂದಾದಾಗ ಮಾತ್ರ ನಮ್ಮ ಬದುಕನ್ನು ಸುಂದರಮಯ ವಾಗಿಸಿಕೊಳ್ಳಲು ಸಾಧ್ಯ. ಮಹಾತ್ಮರು, ಶರಣರು ಹಾಗೆ ಬದುಕಿದ್ದರಿಂದಲೇ ಅವರು…

Read More

ಬೆಳಗಾವಿ ಅಧಿವೇಶನ ಸಂದರ್ಭದಲ್ಲಿಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಸೂಚನೆ

ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ವಿಧಾನಮಂಡಳ ಚಳಿಗಾಲ ಅಧಿವೇಶನ-2024 ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು.ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಕಡಿಮೆ ಸಮಯಾವಕಾಶವಿದ್ದು, ಅಧಿವೇಶನ ಯಶಸ್ವಿಗಾಗಿ ಅಧಿಕಾರಿಗಳು, ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು. ಅಧಿವೇಶನದ ಯಶಸ್ವಿಗಾಗಿ ಈಗಾಗಲೇ…

Read More

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಪರ ಸಂಘಟನೆಗಳಿಂದ ಮುರುಗೋಡ ವನ್ನು ತಾಲೂಕ ಕೇಂದ್ರವನ್ನಾಗಿ ಮಾಡಬೇಕೆಂದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕು ಮುರಗೋಡ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಪರ ಕಾರ್ಮಿಕ ಪರ ದಲಿತಪರ ಹಾಗೂ ರೈತ ಪರ ಸಂಘಟನೆಗಳು ಮತ್ತು ಪರಮಪೂಜ್ಯ ನೀಲಕಂಠ ಶ್ರೀಗಳ ಹಾಗೂ ಪಟ್ಟಣದ ಗುರು ಹಿರಿಯರ ಜೊತೆಗೂಡಿ ಮುರಗೋಡ ಪಟ್ಟಣದ ಹೊಸ ನಿಲ್ದಾಣ ಹತ್ತಿರ ರಸ್ತೆ ಬಂದು ಮಾಡಿ ಮುರುಗೋಡ ವನ್ನು ತಾಲೂಕ ಕೇಂದ್ರವನ್ನಾಗಿ ಮಾಡಬೇಕೆಂದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು ಕಳೆದ 42 ವರ್ಷಗಳಿಂದ ತಾಲೂಕು ರಚನೆ ಹೋರಾಟ ಆರಂಭಿಸಿ ಹಲವಾರು…

Read More

ಖ್ಯಾತ ನ್ಯಾಯವಾದಿಗಳಾದ ಎಸ್.ಎಂ.ಕುಲಕರ್ಣಿ ಅವರಿಗೆ 2024ರ ಜೀವಮಾನ ಸಾಧನೆ ಪ್ರಶಸ್ತಿ ವಿತರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿಪ್ರ ವಿದ್ಯಾ ಸಂಸ್ಥೆಯ ಶ್ರೀಮತಿ ರುಕ್ಮಿಣಿಬಾಯಿ ಮಾಳದಕರ ಜ್ಞಾನ ಪ್ರಬೋಧಿನಿ ವಿದ್ಯಾಲಯ ತುರನೂರ-ರಾಮದುರ್ಗದಲ್ಲಿ ಶ್ರೀ ವೆಂಕಣ್ಣ ಕರಗುಪ್ಪಿಕರ ದತ್ತಿ ನಿಧಿ ಪ್ರಬಂಧ ಸ್ಪರ್ಧೆ ಹಾಗೂ ಖ್ಯಾತ ನ್ಯಾಯವಾದಿಗಳಾದ ಎಸ್.ಎಂ. ಕುಲಕರ್ಣಿ ಅವರಿಗೆ 2024ರ ಜೀವಮಾನ ಸಾಧನೆ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿಪ್ರ ವಿದ್ಯಾ ಸಂಸ್ಥೆಯ ಗೌರವಾಧ್ಯಕ್ಷ ವಿ.ಎನ್. ಗೋಡಖಿಂಡಿ ಮಾತನಾಡಿದರು. ವಿಶೇಷ ಆಹ್ವಾನಿತರಾಗಿ ಶ್ರೀ ಶಿರೀಷ್ ಜೋಶಿ, ನೀರಜಾ ಗಣಾಚಾರಿ ಆಗಮಿಸಿ, ಶಿಕ್ಷಕ ವೃತ್ತಿಯ ಮಹತ್ವ ಹಾಗೂ…

Read More