ಹಿರೇಕೊಪ್ಪ ಕೆ.ಎಸ್ ಗ್ರಾಮದಲ್ಲಿ ಹಳ್ಳಕ್ಕೆ ಬ್ರೀಡ್ಜ ಕಂ. ಬ್ಯಾರೇಜ್ ನಿರ್ಮಾಣಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿಪೂಜೆ ನೆರವೇರಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಿರೇಕೊಪ್ಪ ಕೆ.ಎಸ್ ಗ್ರಾಮದಲ್ಲಿ 2 ಕೋಟಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ಅನುದಾನದ ಅಡಿಯಲ್ಲಿ ಖಬರಸ್ಥಾನದ ಹತ್ತಿರ ಇರುವ ಹಳ್ಳಕ್ಕೆ ಬ್ರೀಡ್ಜ್ ಕಂ. ಬ್ಯಾರೇಜ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ತಾಲೂಕಿನ ಸಮಗ್ರ ಅಭಿವೃದ್ದಿ ಪಡೆಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಹಂತ ಹಂತವಾಗಿ ಸರಕಾರದಿಂದ ಅನುದಾನ ಮಂಜೂರಾದ ತಕ್ಷಣ ಎಲ್ಲಾ ಕಾಮಗಾರಿ ಕೈಗೊಳ್ಳಲು ಕ್ರಮ ವಹಿಸಲಾಗುವದು. ಸರಕಾರದಿಂದ ದೊರೆತ ಅನುದಾನ ಸದ್ಭಳಕೆಯಾಗಲು ಸಂಬಂಧಪಟ್ಟ ಇಲಾಖೆಯ…
