ಸುವರ್ಣ ವಿಧಾನಸೌಧದಲ್ಲಿ ನಡೆದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಯ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾಗರಿಕರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಡಳಿತ ಸುಧಾರಣೆ ಪ್ರಕ್ರಿಯೆಯು ನಿರಂತರವಾಗಿರಬೇಕು. ತಾಂತ್ರಿಕ ಯುಗದಲ್ಲಿ ಪ್ರತಿಕ್ಷಣವೂ ಅಮೂಲ್ಯವಾಗಿದ್ದು, ಸಾರ್ವಜನಿಕರಿಗೆ ಪಾರದರ್ಶಕ ಹಾಗೂ ನ್ಯಾಯಬದ್ಧವಾದ ಆಡಳಿತ ದೊರಕಬೇಕು.ಈ ನಿಟ್ಟಿನಲ್ಲಿ ಸರಕಾರ ಹೆಜ್ಜೆ ಹಾಕುತ್ತಿದೆ.ಸಾರ್ವಜನಿಕರ ಕೆಲಸಗಳನ್ನು ನಿಯಮಾನುಸಾರ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಮಾತನಾಡಿ ಕಂದಾಯ…
