ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಕೆರೆಯ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದಾನೆ
ದಾವಣಗೆರೆ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಾವಣಗೆರೆಜಿಲ್ಲೆಯ ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿನಡೆದಿದೆ.ಕಿತ್ತೂರು ಗ್ರಾಮದ ನಿವಾಸಿ ಮೂರ್ತಿ (40) ಮೃತವ್ಯಕ್ತಿ. ನಿತ್ಯಮೀನು ಹಿಡಿದು ಜೀವನ ಸಾಗಿಸುತ್ತಿದ್ದ ಮೂರ್ತಿ ಎಂದಿನಂತೆಮೀನು ಹಿಡಿಯಲು ತೆಪ್ಪದಲ್ಲಿ ಹೋಗಿದ್ದ ವೇಳೆ ಇದ್ದಕ್ಕಿದ್ದಂತೆತೆಪ್ಪ ಮಗುಚಿ ಬಿದ್ದು ಮೀನಿಗೆ ಹಾಕಿದ್ದ ಬಲೆ ಕಾಲಿಗೆ ಸಿಲುಕಿಸಾವನ್ನಪ್ಪಿದ್ದಾರೆ.ಮೀನಿನ ಬಲೆ ಕಾಲಿಗೆ ಸಿಲುಕಿದ ಹಿನ್ನೆಲೆ ನೀರಿನಲ್ಲಿ ಮುಳುಗಿಕೊನೆಯುಸಿರೆಳೆದಿದ್ದಾರೆ. ಸ್ಥಳೀಯರು ಈತನ ಮೃತದೇಹವನ್ನುಹೊರತೆಗೆದಿದ್ದಾರೆ. ಸ್ಥಳಕ್ಕೆ ಬಿಳಚೋಡು ಠಾಣಾ ಪೊಲೀಸರುಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
