ರಾಮದುರ್ಗ ಅಗ್ನಿಶಾಮಕದ ನೂತನ ಕಟ್ಟಡವನ್ನು ವಿಧಾನಸಭೆಯ ಮುಖ್ಯ ಸಚೇತ ಅಶೋಕ,ಮ ಪಟ್ಟಣ ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಅಗ್ನಿಶಾಮಕ ಠಾಣೆಗೆ ನೂತನವಾಗಿ ನಿರ್ಮಿಸಿದ ಕಟ್ಟಡವನ್ನು ವಿಧಾನಸಭೆಯ ಮುಖ್ಯ ಸಚೇತಕರಾದ ಅಶೋಕ,ಮ ಪಟ್ಟಣ ಉದ್ಘಾಟಿಸಿ ಮಾತನಾಡಿದ ಅವರು, ಇಲಾಖೆಯ ಸಿಬ್ಬಂದಿ ದಿನದ 24 ಘಂಟೆಗಳ ಕಾಲ ಸಂಪೂರ್ಣ ಜಾಗೃತರಾಗಿರಬೇಕು. ಅಗ್ನಿ ಅವಘಡಗಳು ನಡೆಯುವುದಕ್ಕೆ ಸಮಯ ಸಂದರ್ಭಗಳು ಇರುವುದಿಲ್ಲ. ತಮ್ಮ ಕಾರ್ಯಾಲಯಕ್ಕೆ ಕರೆ ಬಂದ ತಕ್ಷಣ ಆದಷ್ಟು ಬೇಗ ಸ್ಥಳಕ್ಕೆ ಆಗಮಿಸಿದಲ್ಲಿ ಮಾತ್ರ ಅಧಿಕ ಅನಾಹುತ ತಪ್ಪಿಸಲು ಸಾಧ್ಯವಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅಗ್ನಿಶಾಮಕ ಠಾಣೆಯ…
