ಧಾರವಾಡ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ಧಾರವಾಡ ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಜರುಗಿದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಉದ್ಘಾಟಿಸಿ, ಮಾತನಾಡಿದರು. 12 ನೇ ಶತಮಾನದ ಬಸವಣ್ಣನವರ ಸಮಕಾಲಿನ ಶ್ರೇಷ್ಠ ವಚನಗಾರರಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರು ಒಬ್ಬರು. ಇಂತಹ ಮಾಹಾನ್ ವ್ಯಕ್ತಿಗಳ ಆದರ್ಶಗಳನ್ನು ಇಂದಿನ ಸಮಾಜ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ಜಿಲ್ಲಾ ಗಂಗಮತಸ್ಥರ ಹಿತರಕ್ಷಕ ಸಂಘದ ಅಧ್ಯಕ್ಷ ಅರವಿಂದ ಏಗನಗೌಡರ ಅವರು ಮಾತನಾಡಿ,…
