ರಾಮದುರ್ಗ ಪ್ರೇಮದ ಹೆಸರಿನಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ತಡೆಯಬೇಕೆಂದು ವಿಶ್ವ ಹಿಂದೂ ಪರಿಷತ್ತಿನ ಬಜರಂಗದಳವತಿಯಿಂದ ಪೊಲೀಸ್ ಠಾಣೆಗೆ ಮನವಿ.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆ ರಾಮದುರ್ಗ ಇವರಿಗೆ ವಿಶ್ವ ಹಿಂದೂ ಪರಿಷತ್ತಿನ ಬಜರಂಗದಳವತಿಯಿಂದ ಪ್ರೇಮದ ಹೆಸರಿನಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ತಡೆಯಬೇಕೆಂದು ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದರು. ರಾಮದುರ್ಗ ನಗರದಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಪ್ರೇಮದ ಹೆಸರಿನಲ್ಲಿ ಮನೆ ಬಿಟ್ಟು ಓಡಿ ಹೋಗುವ ಪ್ರಕರಣಗಳು ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳ ಹಾದಿಯಲ್ಲಿ ಅಲ್ಲಲ್ಲಿ ಗುಂಪಾಗಿ ನಿಂತು ಹುಡುಗಿಯರನ್ನು ಛೇಡಿಸುವ, ಜೋರಾಗಿ ಬೈಕ್ ಓಡಿಸುವ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹುಡುಗಿಯರನ್ನು ಪುಸಲಾಯಿಸಿ ಅವರ ಬ್ರೈನ್ ವಾಶ್ ಮಾಡಿ ಓಡಿಸಿಕೊಂಡು…
