ಎಆರ್ಒ ಮಂಜುಳಾ ವಿರುದ್ಧ ಲೋಕಾಯುಕ್ತಕ್ಕೆ ಎನ್.ಆರ್.ರಮೇಶ್ ದೂರು
ಬೆಂಗಳೂರು ಮಾಜಿ ಸಚಿವ ಹಾಗೂ ಶಾಸಕ ಎಸ್.ಟಿ.ಸೋಮಶೇಖರ್ ಅವರ ಪರಮಾಪ್ತ ಅಶ್ವತ್ಥ್ ಎಂಬ ವ್ಯಕ್ತಿ ನಿರ್ಮಿಸಿರುವ ಅಕ್ರಮ ಬಡಾವಣೆಗೆ ಕಾನೂನು ಬಾಹಿರವಾಗಿ ಎ ಖಾತಾಗಳನ್ನು ಮಾಡಿ ಕೊಡುವ ಮೂಲಕ ಪಾಲಿಕೆಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಹೇರೋಹಳ್ಳಿ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಮಂಜುಳಾ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿ ಗ್ರಾಮದಲ್ಲಿರುವ 4.20 ಎಕರೆ ವಿಸ್ತೀರ್ಣದ ಸ್ವತ್ತಿನಲ್ಲಿ ಅಶ್ವಥ್ ಎಂಬಾತ ಬಿಡಿಎ ನಕ್ಷೆ ಮಂಜೂರಾತಿಯನ್ನೇ ಪಡೆಯದೆ…
