ಅತೀವೃಷ್ಟಿ/ಪ್ರವಾಹ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ವಹಿಸಿ ಅವರು ಮಾತನಾಡಿದರು.ಮಹಾರಾಷ್ಟಾ ರಾಜ್ಯದಲ್ಲಿ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ನದಿಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗುತ್ತಿರುವದರಿಂದ ಜಿಲ್ಲೆಯಲ್ಲಿ ಉಂಟಾಗಬಹುದಾದ ಅತೀವೃಷ್ಟಿ/ಪ್ರವಾಹ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು , ಹುಕ್ಕೇರಿ, ಖಾನಾಪೂರ, ನಿಪ್ಪಾಣಿ, ಚಿಕ್ಕೋಡಿ ಭಾಗದಲ್ಲಿ ಮಳೆ ಹೆಚ್ಚಿರುವ ಕಾರಣ ಸಂಬಂಧಿಸಿದ ಅಧಿಕಾರಿಗಳು ಜಲಾಶಯ ಮಟ್ಟದ ಕುರಿತು ನಿರಂತರ ನಿಗಾ ವಹಿಸಬೇಕು ಎಂದರು. ಅಗತ್ಯವಿರುವ…
